Advertisement

ಸಿಎಂ ಬಿಎಸ್‌ವೈ ಭೇಟಿ ಮಾಡಿದ ಬಿ.ಸಿ.ಪಾಟೀಲ್‌

10:53 PM Aug 04, 2019 | Lakshmi GovindaRaj |

ಬೆಂಗಳೂರು: ಅನರ್ಹಗೊಂಡಿರುವ ಶಾಸಕ ಬಿ.ಸಿ. ಪಾಟೀಲ್‌ ಅವರು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಡಾಲರ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಿವಾಸಕ್ಕೆ ಭಾನುವಾರ ಬೆಳಗ್ಗೆ ಭೇಟಿ ನೀಡಿದ್ದ ಬಿ.ಸಿ.ಪಾಟೀಲ್‌, ಕೆಲ ಕಾಲ ಸಮಾಲೋಚನೆ ನಡೆಸಿದರು.

Advertisement

ನಂತರ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ ಹಾಗೂ ಕಾನೂನಿನ ಮೇಲೆ ಪೂರ್ಣ ಪ್ರಮಾಣದ ನಂಬಿಕೆ ಇದೆ. ಕೊನೆಯವರೆಗೂ ಕಾನೂನಿನ ಹೋರಾಟ ಮಾಡಲಾಗುತ್ತದೆ. ಸುಪ್ರೀಂಕೋರ್ಟ್‌ನಲ್ಲಿ ನಮ್ಮ ಪರವಾಗಿ ವಾದ ಮಂಡಿಸಲಿರುವ ವಕೀಲರೊಂದಿಗೆ ಈಗಾಗಲೇ ಸುದೀರ್ಘ‌ ಚರ್ಚೆ ನಡೆಸಿದ್ದೇವೆ. ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ಅವರ ಮೇಲೆ ಸಾಕಷ್ಟು ನಂಬಿಕೆ ಇಟ್ಟಿದ್ದೇವು. ಸಭಾಧ್ಯಕ್ಷರ ಸ್ಥಾನದಲ್ಲಿ ಕುಳಿತು ಸಾಕಷ್ಟು ಮಾತಾಡುತ್ತಿದ್ದರು.

ಕಾಂಗ್ರೆಸ್‌ ನಾಯಕರು ಏನು ಬೇಕಾದರೂ ಮಾಡಿಕೊಳ್ಳಲಿ, ಕ್ಷೇತ್ರದ ಜನತೆ ನಮ್ಮ ಪರವಾಗಿದ್ದಾರೆ. ಯಾವುದೇ ಭಯ ಇಲ್ಲ ಎಂದು ಹೇಳಿದರು. ಹೀರೆಕೆರೂರು ಅಭಿವೃದ್ಧಿಯ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗಿದೆ. ಅಗತ್ಯ ಅನುದಾನ ನೀಡುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಅನರ್ಹಗೊಂಡಿರುವ ಶಾಸಕರಾದ ರೋಷನ್‌ ಬೇಗ್‌ ಹಾಗೂ ಡಾ.ಸುಧಾಕರ್‌ ಅವರು ಶನಿವಾರವಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಬೆನ್ನಲ್ಲೇ, ಬಿ.ಸಿ.ಪಾಟೀಲ್‌ ಅವರು ಭೇಟಿ ಮಾಡಿ, ಇನ್ನಷ್ಟು ಕುತೂಹಲ ಮೂಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next