Advertisement

ಬೆಂಗಳೂರಿನಿಂದ ಹಳ್ಳಿಗಳಿಗೆ ಬಂದ ಜನರ ಬಗ್ಗೆ ನಿಗಾ ವಹಿಸಿ: ಜಿಲ್ಲಾಧಿಕಾರಿಗಳಿಗೆ ಸಿಎಂ

01:51 PM Apr 29, 2021 | Team Udayavani |

ಬೆಂಗಳೂರು: ಕೋವಿಡ್ 19 ವಿಷಯಕ್ಕೆ ಸಂಬಂಧಿಸಿದಂತೆ ‌ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಲವು ಸಭೆಗಳನ್ನು ನಡೆಸಿದರು.

Advertisement

‌ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ‌ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು‌ ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರತಜ್ಞರು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್‌ ಮತ್ತು ನಿರ್ದೇಶಕರುಗಳೊಂದಿಗೆ ಸಿಎಂ ವಿಡಿಯೋ ಸಂವಾದ ನಡೆಸಿದರು.

ಬಹಳಷ್ಟು ಜನರು ಬೆಂಗಳೂರಿನಿಂದ ಹಳ್ಳಿಗಳಿಗೆ ಹೋಗುತ್ತಿದ್ದಾರೆ. ಅವರ ಬಗ್ಗೆ ನಿಗಾ ಇರಿಸಿ. ರೋಗಿಗಳಿಗೆ ಮೆಡಿಕಲ್ ಕಿಟ್ ನೀಡಲು ವ್ಯವಸ್ಥೆ ಮಾಡಬೇಕು. ಹೋಮ್ ಐಸಲೋಶನ್ ಬಯಸುವವರಿಗೆ ಸೂಕ್ತ ವೈದ್ಯಕೀಯ ಸಲಹೆ ನೀಡಬೇಕು ಎಂದು ಸಿಎಂ ಸೂಚಿಸಿದ್ದಾರೆ.

ಗಡಿ ಜಿಲ್ಲೆಗಳಲ್ಲಿ ಬಹಳಷ್ಟು ಜನರು ಮಹಾರಾಷ್ಟ್ರ ಮುಂತಾದ ಕಡೆಗಳಿಂದ ರೋಗಿಗಳು ಬರುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಅವರೇ ತುಂಬಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next