Advertisement

ಪ್ರಧಾನಿ ಭೇಟಿಯಾದ ಸಿಎಂ ಬಿಎಸ್‌ವೈ

01:09 AM Sep 08, 2019 | Lakshmi GovindaRaju |

ಬೆಂಗಳೂರು: ಚಂದ್ರಯಾನ-2 ಯೋಜನೆಯ ಅಂತಿಮ ಕ್ಷಣಗಳ ವೀಕ್ಷಣೆಗೆ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭೇಟಿ ಮಾಡಿದರು. ಚಂದ್ರಯಾನ-2 ಯೋಜನೆಯ ವೀಕ್ಷಣೆ ಮುಗಿಸಿ, ಪ್ರಧಾನಿಯವರು ಯಲಹಂಕದ ವಾಯುಸೇನಾ ನೆಲೆಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ಹೊರಟರು.

Advertisement

ಈ ವೇಳೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ್ ನಾರಾಯಣ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮೊದಲಾದವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹೂಗುತ್ಛ ನೀಡಿ, ರಾಜ್ಯದ ಪ್ರವಾಹ ಹಾಗೂ ಮಳೆಯಿಂದಾದ ಹಾನಿಯನ್ನು ಅವರ ಗಮನಕ್ಕೆ ತಂದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next