Advertisement

ಸಿದ್ದರಾಮಯ್ಯ ಯಾವ ಹಿನ್ನೆಲೆಯಿಂದ ಬಂದಿದ್ದಾರೆ? ಅವರ ಹಿನ್ನೆಲೆ ಏನು? ಯಡಿಯೂರಪ್ಪ

11:56 AM Mar 05, 2021 | Team Udayavani |

ಬೆಂಗಳೂರು: ಪ್ರತಿಪಕ್ಷ ನಾಯಕರಿಗೆ ಟೀಕೆ ಮಾಡುವುದೇ ಕೆಲಸ. ಎಲ್ಲದಕ್ಕೂ ಆರ್ ಎಸ್ಎಸ್ ಎಂದು ಬೊಬ್ಬೆ ಹೊಡೆಯುತ್ತಾರೆ. ಇವತ್ತು ಈ ಸ್ಥಾನಕ್ಕೆ ಬರಲು ಆರ್ ಎಸ್ಎಸ್ ಕಾರಣ. ಅವರ ಐಡಿಯಾಲಜಿಯನ್ನು ನಾನು ಕಲಿತಿದ್ದೇನೆ. ಮೋದಿ ಪ್ರಧಾನಿಯಾಗಿ ಬರಲು ಆರ್ ಎಸ್ಎಸ್ ಕಾರಣ. ಅವರೇ ಅದನ್ನು ಹೇಳಿಕೊಂಡಿದ್ದಾರೆ. ಸಿದ್ದರಾಮಯ್ಯ ಯಾವ ಹಿನ್ನೆಲೆಯಿಂದ ಬಂದಿದ್ದಾರೆ, ಅವರ ಹಿನ್ನೆಲೆ ಏನು ಎಂದು ಮುಖ್ಯಂಮತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿರುವ ಅಂತರಿಕ ಗೊಂದಲ ಬಗೆಹರಿಸಿಕೊಳ್ಳಲಿ. ಇವರು ಎಷ್ಟು ಬಾರಿ ಹೇಳುತ್ತಾರರೋ, ಅಷ್ಟು ಆರ್ ಎಸ್ಎಸ್ ಬಲಿಷ್ಠವಾಗಲಿದೆ. ಟೀಕೆ ಟಿಪ್ಪಣಿ ಮಾಡಲಿ, ಅದನ್ನು ಚರ್ಚೆ ಮೂಲಕ ಮಾಡಲಿ ಎಂದರು.

ಇದನ್ನೂ ಓದಿ:ಬಹಳ ದಿನಗಳ ನಂತರ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. ಇಬ್ರಾಹಿಂ!

ಸಿದ್ಧರಾಮಯ್ಯನವರೇ ನೀವು ವಿಪಕ್ಷ ನಾಯಕರಿದ್ದೀರಿ, ನೀವು ಹೇಳುವ ಮಾತು ಇಡೀ ಕಾಂಗ್ರೆಸ್ ಪಕ್ಷ ಹೇಳಿದಂತೆ. ವಿರೋಧ ಪಕ್ಷದ ನಾಯಕರಾಗಿ ಹಗುರವಾಗಿ ಮಾತಾಡಬೇಡಿ. ವಿಪಕ್ಷ ನಾಯಕನಾಗಿ ಉತ್ತಮವಾಗಿ ನಡೆಯಿರಿ ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next