Advertisement

ಯಡಿಯೂರಪ್ಪ ಆರೋಗ್ಯ ಸ್ಥಿರ: ಆಸ್ಪತ್ರೆಯಲ್ಲಿ ಪುಸ್ತಕ ಓದುತ್ತಿದ್ದಾರೆ ಸಿಎಂ ಬಿಎಸ್ ವೈ

09:36 AM Apr 18, 2021 | Team Udayavani |

ಬೆಂಗಳೂರು: ಕೋವಿಡ್-19 ಸೋಂಕು ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Advertisement

ಎರಡನೇ ಬಾರಿ ಸೋಂಕು ದೃಢಪಟ್ಟ ಹಿನ್ನೆಲೆ ಶುಕ್ರವಾರ ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಇದನ್ನೂ ಓದಿ:ಮದುವೆಗೆ ಪಾಸ್‌ ಕಡ್ಡಾಯ ; ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲು

ಶುಕ್ರವಾರ ತಡರಾತ್ರಿವರೆಗೂ ವಿವಿಧ ಪರೀಕ್ಷೆಗಳನ್ನು ನಡೆಸಿದ್ದು, ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಸಣ್ಣ ಪ್ರಮಾಣದ ಸೋಂಕಿನ ಲಕ್ಷಣಗಳು ಮಾತ್ರ ಕಾಣಿಸಿಕೊಂಡಿವೆ. ತಜ್ಞ ವೈದ್ಯರ ತಂಡವು ನಿಗಾವಹಿಸಿದೆ. ಶನಿವಾರದ ಅಂತ್ಯಕ್ಕೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪುಸ್ತಕ ಓದುತ್ತಿರುವ ಸಿಎಂ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಬಿಎಸ್ ವೈ ದಿನಪತ್ರಿಕೆ ಮತ್ತು ಪುಸ್ತಕಗಳನ್ನು ಓದುತ್ತಿದ್ದಾರೆ. ಮಹಾತ್ಮ ಗಾಂಧೀಜಿ ಅವರ ‘ಆತ್ಮಕತೆ- ಸತ್ಯಾನ್ವೇಷಣೆ, ರವಿ ಬೆಳಗೆರೆ ಅವರ ‘ಹಿಮಾಲಯನ್‌ ಬ್ಲಂಡರ್‌’ ಮುಂತಾದ ಪುಸ್ತಕಗಳನ್ನು ಸಿಎಂ ಬಿಎಸ್ ವೈ ಓದುತ್ತಿದ್ದಾರೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next