Advertisement

ಕೋವಿಡ್ ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ SSLC ಪರೀಕ್ಷೆ, ಇಲ್ಲದಿದ್ದರೆ ರದ್ದು: ಬಿಎಸ್ ವೈ

11:47 AM Jun 04, 2021 | Team Udayavani |

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯಲ್ಲಿ ಸುಧಾರಣೆಯಾದರೆ ಮಾತ್ರ ಎಸ್ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದರು.

Advertisement

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಪಾಲಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಕಾಗಿಲ್ಲ. ಕೋವಿಡ್ ನಿಯಂತ್ರಣಕ್ಕೆ ಬರದಿದ್ದರೆ ಪರೀಕ್ಷೆ ರದ್ದು ಪಡಿಸಲಾಗುವದು ಎಂದರು.

ಬೆಳಗಾವಿಯ ಭೀಮ್ಸ್ ಆಸ್ಪತ್ರೆಯ ಕುರಿತು ಪ್ರಸ್ತಾಪಿಸಿದ ಅವರು ಶೀಘ್ರದಲ್ಲೇ ಬಿಮ್ಸ್‌ಗೆ ಸಮರ್ಥ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡುವದಾಗಿ ಪ್ರಕಟಿಸಿದರು.

ಬಿಮ್ಸ್ ಅವ್ಯವಸ್ಥೆ ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ. ಕಬ್ಬು ಬೆಳೆಗಾರರಿಗೆ ಬರಬೇಕಿರುವ ಬಾಕಿ ಹಣವನ್ನು ಕೊಡಿಸಲು ಕ್ರಮಕೈಗೊಳ್ಳುವದಾಗಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next