Advertisement

ಇಂದು ದಕ್ಷಿಣ ಕನ್ನಡಕ್ಕೆ ಸಿಎಂ ಬಿಎಸ್‌ವೈ

01:57 AM Aug 12, 2019 | sudhir |

ಮಂಗಳೂರು: ಮಳೆಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆ. 12ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

Advertisement

ಅವರು 11.30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮೂಲಕ ಬೆಳ್ತಂಗಡಿಗೆ ತೆರಳಲಿದ್ದಾರೆ. ಮಧ್ಯಾಹ್ನ 1ರಿಂದ 2 ಗಂಟೆಯ ತನಕ ಅಲ್ಲಿ ನೆರೆ ಹಾವಳಿಗೀಡಾದ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ.

ಮಧ್ಯಾಹ್ನ 2. 30ರಿಂದ ಧರ್ಮಸ್ಥಳದಲ್ಲಿ ನೆರೆ ಹಾವಳಿಯ ಪರಿಹಾರ ಕ್ರಮಗಳ ಕುರಿತಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಬಂಟ್ವಾಳಕ್ಕೆ ತೆರಳಿ ವೀಕ್ಷಣೆ ನಡೆಸಲಿದ್ದಾರೆ. ಸಂಜೆ 5. 15ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಮೈಸೂರಿಗೆ ತೆರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next