Advertisement

ಚಿತ್ರದುರ್ಗ ಜಿಲ್ಲೆಯ ಈರುಳ್ಳಿ ಬೆಳೆದ ರೈತ ಮಹಿಳೆಗೆ ಮುಖ್ಯಮಂತ್ರಿಗಳಿಂದ ಆಭಯ

09:48 AM Apr 29, 2020 | keerthan |

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರೈತ ಮಹಿಳೆಯೋರ್ವರು ತಾನು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಅಂತ ಸಾಮಾಜಿಕ ಜಾಲಾತಾಣದಲ್ಲಿ ಅಳಲು ತೋಡಿಕೊಂಡಿದ್ದರು. ಕಷ್ಟಪಟ್ಟು ಬೆಳೆದ ಬೆಳೆ ಈಗ ಹಾಳಾಗುತ್ತಿದ್ದ, ಸರಿಯಾದ ಬೆಲೆಯೂ ಸಿಗುತ್ತಿಲ್ಲ, ಸರಕಾರ ರಕ್ಷಣೆಗೆ ಧಾವಿಸಬೇಕು ಎಂದು ವಿಡಿಯೋ ಮೂಲಕ ವಿನಂತಿಸಿದ್ದರು.

Advertisement

ರೈತ ಮಹಿಳೆಯ ವಿಡಿಯೋ ವೀಕ್ಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಆಕೆಗೆ ಕರೆ‌ ಮಾಡಿ ಆಕೆಯ ಜಾಣತನಕ್ಕೆ‌ ಮೆಚ್ಚಿ ಕೂಡಲೇ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿಕೊಡುತ್ತೇನೆ ಧೈರ್ಯದಿಂದಿರು ಎಂದು ಆತ್ಮಸ್ತೈರ್ಯ ತುಂಬಿದ್ದಾರೆ.

ಕೂಡಲೇ ಜಿಲ್ಲಾಧಿಕಾರಿಗಳ ಜೊತೆ‌ ಮಾತನಾಡಿದ ಮುಖ್ಯಮಂತ್ರಿ ಗಳು‌ ಕೂಡಲೇ ಆ ಹಳ್ಳಿಗೆ ಭೇಟಿ‌ ನೀಡಿ ಆಕೆಯ ಕಷ್ಟ ಆಲಿಸುವಂತೆ ಸೂಚನೆ‌ ನೀಡಿದರು. ಆಕೆ ಬೆಳೆದ ಈರುಳ್ಳಿ ಮತ್ತು ಇತರ ರೈತರು ಅಲ್ಲಿ ಈರುಳ್ಳಿ ಬೆಳೆದು ತೊಂದರೆಗೀಡಾಗಿದ್ದರೆ ಕೂಡಲೇ ಸರ್ಕಾರದ ವತಿಯಿಂದ ಖರೀದಿ‌ ಮಾಡುವಂತೆ ಸೂಚನೆ ನೀಡಿದರು

Advertisement

Udayavani is now on Telegram. Click here to join our channel and stay updated with the latest news.

Next