Advertisement

CM ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ: ಸತೀಶ್ ಜಾರಕಿಹೊಳಿ

05:05 PM Jun 29, 2024 | Team Udayavani |

ಬೆಳಗಾವಿ: ಮುಖ್ಯಮಂತ್ರಿ ಬದಲಾವಣೆ ವಿಷಯ ಮುಗಿದು ಹೋದ ಅಧ್ಯಾಯ ಎಂದು ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಹೇಳಿಕೆ ನೀಡಿದ್ದಾರೆ.

Advertisement

ಚಿಕ್ಕೋಡಿ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಆಯ್ಕೆ ವಿಷಯದಲ್ಲಿ ಈಗಾಗಲೇ ಸಾಕಷ್ಟು ಚರ್ಚೆ ಆಗಿವೆ. ಇದರಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ’ ಎಂದರು.

ಯಾವುದೇ ಸಭೆ ಅಥವಾ ಸಮಾರಂಭಗಳಲ್ಲಿ ಯಾರೋ ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಿದರೆ ಅದಕ್ಕೆ ಅರ್ಥ ಇಲ್ಲ ಎಂದರು.

ಈ ವಿಷಯ ಏನೇ ಇದ್ದರೂ ಪಕ್ಷದ ಚೌಕಟ್ಟಿನಲ್ಲಿಯೇ ನಡೆಯಬೇಕು ಎಂದು ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಸ್ಪಷ್ಟ ನುಡಿಗಳನ್ನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next