Advertisement

CM Conspiracy; ಪ್ರತಾಪ್ ಸಿಂಹ ಹೇಳಿಕೆಗೆ ಅರಣ್ಯ ಸಚಿವ ಖಂಡ್ರೆ ಆಕ್ರೋಶ

08:33 PM Dec 31, 2023 | Team Udayavani |

ಬೀದರ್ : ಅಕ್ರಮವಾಗಿ ಮರಗಳ ಮಾರಣಹೋಮ ಹಿನ್ನಲೆ ವಿಕ್ರಂ ಸಿಂಹ ಬಂಧನ ಘಟನೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಸುಮ್ಮನೆ ಸಿಎಂ ಮತ್ತು ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದು, ಇದನ್ನು ಗಮನಿಸಿದರೆ ಈ ಅಪರಾಧದಲ್ಲಿ ಅವರು ಸಹ ಪರೋಕ್ಷವಾಗಿ ಭಾಗಿಯಗಿದ್ದಾರೆಂದು ಭಾವಿಸಬೇಕಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿರುಗೇಟು ಕೊಟ್ಟಿದ್ದಾರೆ.

Advertisement

ನಗರದಲ್ಲಿ ರವಿವಾರ ಮಾಧ್ಯಮಗಳ ಜತೆ ಮಾತನಾಡಿ, ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಇದರಲ್ಲಿ ಯಾವುದೇ ರಾಜಕೀಯ ಇಲ್ಲ. ಶುಂಠಿ ಬೆಳೆಯುವುದಾಗಿ ಕರಾರು ಮಾಡಿಕೊಂಡು, ಹಾಡುಹಗಲಲ್ಲೇ 126 ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ. ಒಬ್ಬ ಜವಾಬ್ದಾರಿಯುತ ಸಂಸದರಾಗಿರುವ ಪ್ರತಾಪ್, ನಿಷ್ಪಕ್ಷಪಾತ ತನಿಖೆ ಮತ್ತು ಯಾರೇ ತಪ್ಪಿತಸ್ಥರಿರಾಗಲಿ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಬೇಕಿತ್ತು ಎಂದರು.

ಆದರೆ, ಕಾನೂನು ಉಲ್ಲಂಘಿಸಿ, ತನಿಖೆಯ ದಾರಿ ತಪ್ಪಿಸಲು ತನಿಖಾಧಿಕಾರಿಗಳ ಮೇಲೆ ಒತ್ತಡ ಹಾಕಲು ಅಧಿಕಾರದ ದುರುಪಯೋಗ ಮಾಡಿಕೊಳ್ಳಲಾಗಿದೆ. ತಮ್ಮ ಮಗನನ್ನು ಸಂಸದರಾಗಿ ಮಾಡಲು ಸಿಎಂ ಷಡ್ಯಂತ್ರ ನಡೆಸಿದ್ದಾರೆಂಬ ಪ್ರತಾಪ್ ಹೇಳಿಕೆ ಸತ್ಯಕ್ಕೆ ದೂರವಾಗಿದ್ದು, ಮುಖ್ಯಮಂತ್ರಿಗಳು ಇಂತಹ ಸಣ್ಣ ಪುಟ್ಟ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವವರೇ ಅಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next