Advertisement

Politics: ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ, ಡಿಸಿಎಂ

11:02 PM Oct 21, 2023 | Team Udayavani |

ಬೆಂಗಳೂರು: ಪರಿಧಮನಿಯ ಬೈಪಾಸ್‌ ಗ್ರಾಫ್ಟಿಂಗ್‌ (ಸಿಎಬಿಜಿ) ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

Advertisement

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ಡಾ| ವಿವೇಕ್‌ ಜವಳಿ ಅವರ ತಂಡ ನನ್ನನ್ನು ಉತ್ತಮವಾಗಿ ಆರೈಕೆ ಮಾಡಿದ್ಧಾರೆ. ನಾನು ಈಗ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಫೋರ್ಟಿಸ್‌ ಆಸ್ಪತ್ರೆಯ ಕಾರ್ಡಿಯೋಥೊರಾಸಿಕ್‌ ಮತ್ತು ವ್ಯಾಸ್ಕರ್ಲ್ ಸೈನ್ಸ್‌ ಅಧ್ಯಕ್ಷ ಡಾ| ವಿವೇಕ್‌ ಜವಳಿ ಮಾತನಾಡಿ, 5-ಗ್ರಾಫ್ಟ$Õಹೃದಯ ಬೈಪಾಸ್‌ ಅನ್ನು ನಿರ್ವಹಿಸುವುದು ನಮಗೆ ವಾಡಿಕೆಯಾಗಿದೆ. ಆದರೆ ಬೊಮ್ಮಾಯಿ ಅವರ ಅಚಲವಾದ ನಂಬಿಕೆ, ಅವರ ಧೈರ್ಯದ ಮನೋಭಾವಕ್ಕೆ ನಾನು ನಿಜವಾಗಿಯೂ ಪ್ರಭಾವಿತನಾಗಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next