Advertisement

ವಾಲ್ಮೀಕಿ ಸಮುದಾಯಕ್ಕೆ ಸಿಎಂ, ಡಿಸಿಎಂ ಅವಮಾನ 

06:15 AM Oct 25, 2018 | |

ಜಮಖಂಡಿ: ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಮಾರಂಭಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಡಿಸಿಎಂ ಡಾ| ಪರಮೇಶ್ವರ ಹಾಜರಾಗದೇ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು. 

Advertisement

ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಎಚ್‌.ಡಿ.ದೇವೆಗೌಡರಿಗೆ ಸರ್ಕಾರವೇ ವಾಲ್ಮೀಕಿ ಪ್ರಶಸ್ತಿಯನ್ನು
ಘೋಷಿಸಿತ್ತು. ಸಮಾರಂಭಕ್ಕೆ ಮಾಜಿ ಪ್ರಧಾನಿ ಕೂಡ ಆಗಮಿಸದೆ ಅವರೂ ಕೂಡ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದ್ದು, ಸಮಾಜದ ಕ್ಷಮಾಪಣೆ ಕೇಳ ಬೇಕು. ಇಡೀ ಸರ್ಕಾರವೇ ಮಹರ್ಷಿ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದ್ದು, ಸಿಎಂ ಹಾಗೂ ಡಿಸಿಎಂ ಸಾಮೂಹಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next