Advertisement

ಚೆಲುವರಾಯಸ್ವಾಮಿ ಹೇಳಿಕೆಗೆ ಸಿಎಂ ಅಸಮಾಧಾನ

11:27 PM May 10, 2019 | Team Udayavani |

ಬೆಂಗಳೂರು: ಮಾಜಿ ಸಚಿವ ಚೆಲುವರಾಯಸ್ವಾಮಿ ಅವರ ಹೇಳಿಕೆಗಳ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಪ್ತರ ಬಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡರೆ ಮಾತ್ರ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ’ ಎಂಬ ಚೆಲುವರಾಯಸ್ವಾಮಿ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಗಮನಕ್ಕೆ ತರಲು ತೀರ್ಮಾನಿಸಿದ್ದಾರೆ.

Advertisement

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಕೆಲಸ ಮಾಡದೆ ದೂರ ಉಳಿದು ನಂತರ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಜತೆ ಭೋಜನ ಕೂಟದಲ್ಲಿ ಕಾಣಿಸಿಕೊಂಡಿದ್ದ ಬಗ್ಗೆಯೂ ಹೈಕಮಾಂಡ್‌ಗೆ ದೂರು ನೀಡಲಾಗಿತ್ತು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಮುಜುಗರ ಉಂಟು ಮಾಡಿದ್ದಾರೆ.

ಮಂಡ್ಯದ ಮಾಜಿ ಶಾಸಕರು ಸೇರಿ ಕೆಲವು ಕಾಂಗ್ರೆಸ್‌ ನಾಯಕರು ಪದೇಪದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎಂದು ಹೇಳುತ್ತಾರೆ. ಈ ಮೂಲಕ ಸರ್ಕಾರದ ಬಗ್ಗೆ ಅಧಿಕಾರಿಗಳು ಅನುಮಾನ ಪಡುವಂತಾಗಿದೆ. ಇದು ಆಡಳಿತದ ಮೇಲೂ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕೆಮದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರಿಗೆ ದೂರವಾಣಿ ಮೂಲಕ ತಿಳಿಸಿ ಬೇಸರ ಹೊರಹಾಕಿದ್ದಾರೆಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next