Advertisement

ದೇವೇಗೌಡರ ಜತೆಗೆ ಸಿಎಂ ಚರ್ಚೆ

11:41 PM Jul 12, 2019 | Team Udayavani |

ಶುಕ್ರವಾರ ವಿಧಾನಮಂಡಲ ಅಧಿವೇಶನಕ್ಕೆ ಮುಂಚೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಭೇಟಿ ಮಾಡಿ ಸಲಹೆ ಪಡೆದ ಸಿಎಂ, ನಂತರ ಕುಮಾರಕೃಪ ಅತಿಥಿ ಗೃಹದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವ ಡಿ.ಕೆ.ಶಿವಕುಮಾರ್‌ ಜತೆ ಚರ್ಚಿಸಿ ನಂತರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಪ್ರಸ್ತಾಪ ಮಾಡಿದರು.

Advertisement

ಅಧಿವೇಶನ ಮುಗಿದ ನಂತರವೂ ಪರಮೇಶ್ವರ್‌, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಅವರ ಜತೆ ಚರ್ಚಿಸಿದರು. ಇದಷ್ಟೇ ಅಲ್ಲ, ಮುನ್ನ ಸಚಿವರಾದ ಆರ್‌. ವಿ.ದೇಶಪಾಂಡೆ, ಕೃಷ್ಣ ಬೈರೇಗೌಡ ಅವರೊಂದಿಗೂ ವಿಧಾನಸೌಧದ ಕಚೇರಿಯಲ್ಲಿ ಸಮಾಲೋಚನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next