Advertisement

ಸಮನ್ವಯ ಸಮಿತಿಯಲ್ಲಿ ಸಿಎಂ ನಿರ್ಧಾರ ಆಗಲ್ಲ: ಸಿದ್ದರಾಮಯ್ಯ

06:00 AM Aug 28, 2018 | Team Udayavani |

ಬಳ್ಳಾರಿ: ಸಮನ್ವಯ ಸಮಿತಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ನಿರ್ಧಾರ ಆಗುವುದಿಲ್ಲ. ಅದು ಇರೋದು ಮೈತ್ರಿ ಸರ್ಕಾರದ ಸಮನ್ವಯತೆ ಸಾಧಿಸುವುದಕ್ಕಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

Advertisement

ಬಳ್ಳಾರಿ ನಗರದ ಬಂಡಿಹಟ್ಟಿ ಪ್ರದೇಶದಲ್ಲಿ ಸೋಮವಾರ ಆಯೋಜಿಸಿದ್ದ ಕನಕ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ಇರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವಿನ ಸಮನ್ವಯತೆ ಸಾಧಿಸುವುದಕ್ಕೆ ಮಾತ್ರ. ಮುಖ್ಯಮಂತ್ರಿ ಅಭ್ಯರ್ಥಿಯಾಗುವ ವಿಚಾರ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಗೆ ಬರುವುದಿಲ್ಲ. ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನದ ಮೇರೆಗೆ ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡಿದೇªವೆ. ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್‌ ಅವರನ್ನು ಸಮನ್ವಯ ಸಮಿತಿಗೆ ಸೇರ್ಪಡೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

ಸಮ್ಮಿಶ್ರ ಸರ್ಕಾರವೇ ಬೇರೆ, ಸ್ವತಂತ್ರ ಸರ್ಕಾರವೇ ಬೇರೆ. ಅದಕ್ಕಾಗಿಯೇ ಸಮನ್ವಯ ಸಮಿತಿ ರಚಿಸಲಾಗಿದೆ. ಆ ಸಮಿತಿಯಲ್ಲಿ ಯಾರಿರಬೇಕು ಎಂಬುದನ್ನು ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡರು, ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿಗಳು ಸೇರಿ ತೀರ್ಮಾನ ಮಾಡುತ್ತಾರೆ. ಜೆಡಿಎಸ್‌, ಕಾಂಗ್ರೆಸ್‌ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರೂ ಆ ಸಮಿತಿಯಲ್ಲಿರಬೇಕು.
– ಎಚ್‌.ವಿಶ್ವನಾಥ್‌, ಜೆಡಿಎಸ್‌ ರಾಜ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next