Advertisement

ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿ: ಗಾಯ

11:19 PM May 04, 2019 | Lakshmi GovindaRaj |

ಆಲ್ದೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ಪಡೆ ಇದ್ದ ವಾಹನ ಪಲ್ಟಿಯಾಗಿ ನಾಲ್ವರು ಗಾಯಗೊಂಡ ಘಟನೆ ಶನಿವಾರ ಸಂಭವಿಸಿದೆ.

Advertisement

ಆಲ್ದೂರು ಸಮೀಪದ ಶಂಕರ್‌ ಫಾಲ್ಸ್‌ ತಿರುವಿನ ಬಳಿ ವಾಹನ ಪಲ್ಟಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆರ್‌ಪಿಐ ಪ್ರದೀಪ್‌ಕುಮಾರ್‌, ಎಪಿಸಿ ಮೋಹನ್‌ಕುಮಾರ್‌, ಪ್ರೊಬೇಷನರಿ ಪಿಎಸ್‌ಐ ವಿರೂಪಾಕ್ಷಿ, ಚಾಲಕ ಗೋಪಾಲ್‌ ಗಾಯಗೊಂಡಿದ್ದು, ಚಿಕ್ಕಮಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಪ್ಪ ತಾಲೂಕಿನ ಕಮ್ಮರಡಿ ಸಮೀಪದ ಕುಡೆಲ್ಲಿಯ ಉಮಾಮಹೇಶ್ವರ ದೇವಸ್ಥಾನದಲ್ಲಿ ಶನಿವಾರ ದೇವೇಗೌಡರ ಕುಟುಂಬ ಕೈಗೊಂಡಿದ್ದ ಹೋಮದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ, ರಸ್ತೆ ಮಾರ್ಗವಾಗಿ ಹಾಸನ ಜಿಲ್ಲೆಗೆ ತೆರಳುತ್ತಿದ್ದರು.

ಸಿಎಂ ಪ್ರಯಾಣಿಸುತ್ತಿದ್ದ ವಾಹನದ ಹಿಂಭಾಗದಲ್ಲಿದ್ದ ಬೆಂಗಾವಲು ಪಡೆಯ ವಾಹನ ಶಂಕರ್‌ ಫಾಲ್ಸ್‌ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಲ್ಲಿ ತೆರಳುತ್ತಿದ್ದವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next