Advertisement

ಬಿಎಸ್‌ವೈ ವಿರುದ್ಧ ಹೇಳಿಕೆ : ಸಿಎಂಗೆ ನೋಟಿಸ್‌

10:35 AM Mar 16, 2018 | Karthik A |

ಬೆಂಗಳೂರು: ಸಾರ್ವಜನಿಕ ವೇದಿಕೆಗಳಲ್ಲಿ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹೇಳಿಕೆ ನೀಡದಂತೆ ನಿರ್ದೇಶಿಸಲು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌ ಯಡಿಯೂರಪ್ಪ ಸಲ್ಲಿಸಿರುವ ರಿಟ್‌ ಅರ್ಜಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಲಯದಿಂದ ದೋಷ ಮುಕ್ತ ಗೊಂಡಿದ್ದರೂ ಸಹ ಸಿಎಂ ಮತ್ತಿತರರು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ  ಸಾರ್ವಜನಿಕ ಜೀವನದಲ್ಲಿರುವ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವುದನ್ನು ಪ್ರತಿಬಂಧಿಸಬೇಕು ಎಂದು ಬಿ.ಎಸ್‌ ಯಡಿಯೂರಪ್ಪ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.

Advertisement

ಈ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾ| ಜಿ. ನರೇಂದರ್‌ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಸಚಿವ ಎಂ.ಬಿ ಪಾಟೀಲ್‌, ವಿಧಾನಪರಿಷತ್‌ ಸದಸ್ಯರಾದ ಸಿ.ಎಂ. ಇಬ್ರಾಹಿಂ, ವಿ.ಎಸ್‌ ಉಗ್ರಪ್ಪ, ಕಾಂಗ್ರೆಸ್‌ ವಕ್ತಾರ ಬ್ರಿಜೇಶ್‌ ಕಾಳಪ್ಪ ಸಹಿತ  ಇನ್ನಿತರರಿಗೆ ನೋಟಿಸ್‌ ಜಾರಿಗೊಳಿಸಿತು.

ವಿಚಾರಣೆ ವೇಳೆ ಯಡಿಯೂರಪ್ಪ ಪರ ವಕೀಲರು ವಾದಿಸಿ, ಈ ಅರ್ಜಿ ಇತ್ಯರ್ಥವಾಗುವ ತನಕ ಅರ್ಜಿದಾರರ ವಿರುದ್ಧ ಹೇಳಿಕೆ ನೀಡದಂತೆ ಮಧ್ಯಾಂತರ ಆದೇಶ ನೀಡಲು ಮಾಡಿದ ಮನವಿಯನ್ನು ನ್ಯಾಯಪೀಠ ನಿರಾ ಕರಿಸಿ ವಿಚಾರಣೆಯನ್ನು ಮಾರ್ಚ್‌ 23ಕ್ಕೆ ಮುಂದೂಡಿತು. ಈ ಹಿಂದೆ ಬಿಎಸ್‌ವೈ ಅವರು ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್‌ ಕೋರ್ಟ್‌ ವಜಾಗೊಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next