Advertisement

ನಿರ್ಮಲಾ ಸೀತಾರಾಮನ್‌ಗೆ ಸಿಎಂ ಬಿಎಸ್‌ವೈ ಮನವಿ

02:20 PM May 08, 2021 | Team Udayavani |

ಬೆಂಗಳೂರು: ಕೋವಿಡ್‌ ಸಂಕಷ್ಟಕ್ಕೆ ಸಿಲುಕಿರುವ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ನೆರವಾಗುವಂತೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಲ್ಲಿ ಮನವಿ ಮಾಡಿದ್ದಾರೆ.

Advertisement

ಈ ಬಗ್ಗೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದಿರುವ ಬಿ.ಎಸ್‌.ಯಡಿಯೂರಪ್ಪ ಅವರು ಕೋವಿಡ್‌ ಸಂಕಷ್ಟದ ಸಮಯದಲ್ಲಿ ಉತ್ತರಕರ್ನಾಟಕ ಭಾಗದ ಜನರು ಆಕ್ಸಿಜನ್‌ಬೆಡ್‌ ಇಲ್ಲದೆ ಪರದಾಡುತ್ತಿದ್ದಾರೆ. ಅದರಲ್ಲೂ ಬೀದರ್‌, ಕಲಬುರಗಿ, ಬೆಳಗಾವಿ ಹಾಗೂ ರಾಯಚೂರು ಭಾಗದ ಲಕ್ಷಾಂತರ ಜನರು ಕೋವಿಡ್‌ ಹಿನ್ನೆಲೆಯಲ್ಲಿ ಸರಿಯಾದ ಆರೋಗ್ಯ ಸೌಕರ್ಯಗಳು ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆ ಹಿನ್ನೆಲೆಯಲ್ಲಿ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಿಂದಾಗಲಿ ಅಲ್ಲದೆ ಇತರೆ ಮೂಲಗಳಿಂದಾಗಿ 250 ಹಾಸಿಗೆಯುಳ್ಳ ಆಕ್ಸಿಜನ್‌ ಬೆಡ್‌ ಅನ್ನು ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದಾರೆ.

ಕಲಬುರಗಿ ಭಾಗದಲ್ಲಿ ಈ ಆಸ್ಪತ್ರೆ ತುರ್ತು ಅಗತ್ಯವಿದ್ದು ಈ ಸೇವೆಗೆ ಮುಂದಾಗಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಅವರಲ್ಲಿ ಮನವಿ ಮಾಡಿದ್ದಾರೆ. ಯಲಹಂಕದ ಕೆಪಿಸಿಎಲ್‌ ನಲ್ಲಿರುವ ಆಕ್ಸಿನ್‌ ಘಟಕದಿಂದ ಆಕ್ಸಿಜನ್‌ ರಾಜ್ಯಕ್ಕೆ ದೊರಕುವಂತಾಗಬೇಕು ಎಂದು ಕೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next