Advertisement
ಉಮೇಶ್ ಜಾಧವ್ ಜತೆಗೆ ಇನ್ನೆರಡು ದಿನಗಳಲ್ಲಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಹಾಗೂ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಕೂಡ ರಾಜೀನಾಮೆ ನೀಡಲಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ರಮೇಶ್ ಜಾರಕಿಹೊಳಿ ನಿವಾಸದಲ್ಲೇ ಬುಧವಾರ ಸಮಾಲೋಚನೆ ನಡೆಸಿದ್ದಾರೆ.ಅತೃಪ್ತ ಶಾಸಕರೊಂದಿಗೆ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ರಾಜಕೀಯ ಚಿತ್ರಣ ಬದಲಾಗಲಿದ್ದು, ರಮೇಶ್ ಜಾರಕಿಹೊಳಿ ಹಾಗೂ ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎನ್ನಲಾ ಗಿದೆ.
Related Articles
● ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ.
Advertisement
ರಾಜಕೀಯಕ್ಕಿಂತ ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ನನ್ನ ಸಹೋದರನಿಗೆ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಚರ್ಚೆಯಾಗಿಲ್ಲ. ನನ್ನ ಸಹೋದರ ಬಿಜೆಪಿಗೆ ಹೋದರೆ ಅವನೊಂದಿಗೆ ಮಾತನಾಡಲ್ಲ.ನನಗೂ ಅವನಿಗೂ ಸಂಬಂಧ ಇರುವುದಿಲ್ಲ.● ಬಿ. ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ. ರಾಜಕೀಯ ಚರ್ಚೆ ಇಲ್ಲ
ಶಾಸಕರ ಭೇಟಿಯ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ, ನಾನು ರಾಜಕೀಯ ಚರ್ಚೆ ಮಾಡಲು ಬಂದಿರಲಿಲ್ಲ. ಅವರ ಕ್ಷೇತ್ರದ ಮತ್ತು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಂದಿದ್ದೆ. ತಿಂಡಿ ತಿನ್ನಲು ಕರೆದಿದ್ದರು. ಒಳ್ಳೆಯ ತಿಂಡಿ ಕೊಟ್ಟಿದ್ದಾರೆ. ಅವರನ್ನು ಮನವೊಲಿಸಲು ಸಮಸ್ಯೆ ಏನೂ ಇಲ್ಲ. ಸ್ಥಳೀಯ ಮಟ್ಟದ ಸಮಸ್ಯೆಗಳಿವೆ ಅವುಗಳನ್ನು ಕಾಂಗ್ರೆಸ್ ನಾಯಕರು ಬಗೆಹರಿಸುತ್ತಾರೆ ಎಂದು ಹೇಳಿದರು.