Advertisement

ಗವರ್ನರ್‌ ಭೇಟಿಯಾದ ಸಿಎಂ:ಸಂಜೆ 5.20 ಕ್ಕೆ 8 ಸಚಿವರ ಪ್ರಮಾಣವಚನ

12:06 PM Dec 22, 2018 | Team Udayavani |

ಬೆಂಗಳೂರು: ನಿರೀಕ್ಷೆಯಂತೆ ಶನಿವಾರ ಸಂಜೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ 11.30 ಕ್ಕೆ ರಾಜ್ಯ ಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದ್ದಾರೆ.

Advertisement

ರಾಜ್ಯಪಾಲರ ಭೇಟಿಯಾಗಿ ಬಂದ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿ ಸಂಜೆ 5.20 ಕ್ಕೆ  ರಾಜಭವನದಲ್ಲಿ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ತಿಳಿಸಿದರು.

ಜೆಡಿಎಸ್‌ನವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗುತ್ತಾರಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಂಜೆ ಕಾದು ನೋಡಿ ಎಂದು ಕುತೂಹಲ ಮೂಡಿಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next