Advertisement

ಅಮೆರಿಕಾದಿಂದ ವಾಪಾಸಾದ ಸಿಎಂ; ಸಂಜೆಯಿಂದ ಮಹತ್ವದ ಕಾರ್ಯತಂತ್ರ

09:56 AM Jul 08, 2019 | Vishnu Das |

ಹೊಸದಿಲ್ಲಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 13 ಶಾಸಕರ ರಾಜೀನಾಮೆ ಬಳಿಕಮೈತ್ರಿ ಸರಕಾರ ಸಂಕಷ್ಟಕ್ಕೆ ಸಿಲುಕಿರುವ ವೇಳೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದಿಂದ ಹಿಂತಿರುಗಿದ್ದು, ಭಾನುವಾರ ಮಧ್ಯಾಹ್ನ ನವದೆಹಲಿಗೆ ಬಂದಿಳಿದಿದ್ದಾರೆ. ಸಂಜೆ 5.40 ರ ವೇಳೆಗೆ ಬೆಂಗಳೂರಿಗೆ ಬರಲಿದ್ದಾರೆ.

Advertisement

ಸರ್ಕಾರ ಅಲ್ಪ ಮತಕ್ಕೆ ಕುಸಿದಿರುವ ವೇಳೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಾಯಕರು ಮುಖ್ಯಮಂತ್ರಿ ಅವರ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ವಿಶೇಷ ವಿಮಾನದಲ್ಲಿ ಆಗಮಿಸಿಲಿರುವ ಸಿಎಂ ನೇರವಾಗಿ ಪದ್ಮನಾಭನಗರದ ಎಚ್‌.ಡಿ.ದೇವೇಗೌಡರ ನಿವಾಸಕ್ಕೆ ತೆರಳಲಿದ್ದಾರೆ. ಬಳಿಕ ಜೆಡಿಎಸ್‌ನ ಶಾಸಕಾಂಗ ಸಭೆಯಲ್ಲಿ ಭಾಗಿಯಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next