Advertisement

ಎಚ್‌ಡಿಡಿ ಭೇಟಿ ಮಾಡಿದ ಎಚ್‌ಡಿಕೆ

01:49 AM May 28, 2019 | Team Udayavani |

ಬೆಂಗಳೂರು: ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕಸರತ್ತಿನ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ರಾತ್ರಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದಕ್ಕೂ ಮುನ್ನ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ದೇವೇಗೌಡರನ್ನು ಭೇಟಿ ಮಾಡಿದ್ದರಿಂದ ಈ ಭೇಟಿ ಕುತೂಹಲ ಮೂಡಿಸಿದೆ.

Advertisement

ಸಂಪುಟ ವಿಸ್ತರಣೆಗೆ ಕಾಂಗ್ರೆಸ್‌ ಒಪ್ಪಿಕೊಂಡಿರುವ ಬಗ್ಗೆ ಕುಮಾರಸ್ವಾಮಿಯವರು ದೇವೇಗೌಡರಿಗೆ ಮಾಹಿತಿ ನೀಡಿ ದರು. ಮೊದಲಿಗೆ ಮೂರು ಸ್ಥಾನ ಭರ್ತಿ ಮಾಡುವ ಬಗ್ಗೆ ಚರ್ಚಿಸಲಾಯಿತು. ಆದರೆ, ಜೆಡಿಎಸ್‌ನಿಂದಲೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಕೆಲವು ಶಾಸಕರಿದ್ದು ಅವರಿಗೆ ಬೇಸರ ವಾಗದಂತೆ ನೋಡಿಕೊಳ್ಳಿ ಎಂದು ದೇವೇಗೌಡರು ಸೂಚನೆ ನೀಡಿದರು. ಸಂಪುಟ ಪುನಾರಚನೆ ಎಂದರೆ ಕಷ್ಟವಾಗಬಹುದು. ಹಿರಿಯ ಸಚಿವರನ್ನು ಸಂಪುಟದಿಂದ ತೆಗೆದುಹಾಕಿದರೆ ಬೇರೆ ರೀತಿಯ ಸಮಸ್ಯೆ ಸೃಷ್ಟಿಯಾಗಬಹುದು. ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಹೊಣೆಗಾರಿಕೆ ನೀಡಿ ನಂತರ ಮುಂದುವರಿ ಯುವುದು ಸೂಕ್ತ. ಸದ್ಯಕ್ಕೆ ಸಂಪುಟ ವಿಸ್ತರಣೆ ಮಾತ್ರ ಮಾಡಿ ನಂತರ ಪರಿಸ್ಥಿತಿ ನೋಡಿ ಪುನಾರಚನೆ ಬಗ್ಗೆ ಯೋಚಿಸೋಣ ಎಂದು ಗೌಡರು ಸಲಹೆ ನೀಡಿದರು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next