Advertisement

ಮೇಲ್ಮನೆಗಾಗಿ ಇಂದು ಸಿಎಂ ಇಬ್ರಾಹಿಂ ನಾಮಪತ್ರ ಸಲ್ಲಿಕೆ

11:27 AM Aug 21, 2017 | Team Udayavani |

ಬೆಂಗಳೂರು: ವಿಧಾನ ಪರಿಷತ್‌ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ವಿಧಾನಸೌಧದಲ್ಲಿ ವಿಧಾನಸಭೆಯ ಕಾರ್ಯದರ್ಶಿಯವರಿಗೆ ಸಿ.ಎಂ. ಇಬ್ರಾಹೀಂ ಅವರು ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಇತರ ಮುಖಂಡರು ಉಪಸ್ಥಿರಿರುತ್ತಾರೆ.

Advertisement

ಬಿಜೆಪಿಯ ವಿಮಲಾಗೌಡ ನಿಧನದಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.ಬೇರೆ ಯಾವ ಪಕ್ಷದ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಸದೇ ಇರುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಸಿ.ಎಂ ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.ಸೀಟು ಗೆಲ್ಲಲು ಸಂಖ್ಯಾಬಲದ ಕೊರತೆಯಿಂದ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಈ ಉಪಚುನಾವಣೆ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.ನಾಮಪತ್ರ ಸಲ್ಲಿಕೆಗಿ ಇಂದು ಕೊನೆಯ ದಿನವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next