Advertisement

ಮಂಗಳೂರಲ್ಲಿ ಇರೋದು ಬಿಎಸ್‌ವೈ ಸರಕಾರ ಅಲ್ಲ!

11:16 AM Feb 19, 2020 | sudhir |

ಬೆಂಗಳೂರು: ಮಂಗಳೂರಿನಲ್ಲಿ ಇರುವುದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸರಕಾರವಲ್ಲ; ಅಲ್ಲಿಯದ್ದೇ ಒಂದು ಬೇರೆ ಸರಕಾರ ಇದೆ ಎಂದು ಕಾಂಗ್ರೆಸ್‌ ಸದಸ್ಯ ಸಿ.ಎಂ. ಇಬ್ರಾಹಿಂ ಟೀಕಿಸಿದರು.

Advertisement

ಮಂಗಳವಾರ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿದ ವಂದನಾರ್ಪಣೆ ಪ್ರಸ್ತಾವದ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, “ಸಿಎಎ ವಿರುದ್ಧ ಕಲಬುರಗಿ, ಬೆಂಗಳೂರು ಸಹಿತ ರಾಜ್ಯದ ನಾನಾ ಕಡೆ ಪ್ರತಿಭಟನೆಗಳು ನಡೆದಿವೆ. ಎಲ್ಲಿಯೂ ಗಲಾಟೆ ಆಗಲಿಲ್ಲ. ಆದರೆ ಮಂಗಳೂರಿನಲ್ಲಿ ಮಾತ್ರ ಗಲಾಟೆ ಜತೆಗೆ ಗೋಲಿಬಾರ್‌ ಕೂಡ ಆಯಿತು. ಯಾಕೆಂದರೆ ಅಲ್ಲಿರುವುದು ಯಡಿಯೂರಪ್ಪ ಅವರ ಸರಕಾರವಲ್ಲ. ಬೇರೆಯೇ ಸರಕಾರ ಇದೆ ಎಂದು ತೀಕ್ಷ್ಣವಾಗಿ ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್‌)ನಲ್ಲಿ ಕೇಳುವ ದಾಖಲೆಗಳು ನನ್ನನ್ನೂ ಒಳಗೊಂಡಂತೆ ಬಹುತೇಕರು ಸಲ್ಲಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮುಸ್ಲಿಂ ಬುದ್ಧಿಜೀವಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next