Advertisement

ಪಡಿತರ ವಿತರಣಾ ವ್ಯವಸ್ಥೆ ಬಲಪಡಿಸಲು ಸಿಎಂ ಸೂಚನೆ

12:29 AM Jun 21, 2019 | Sriram |

ಬೆಂಗಳೂರು: ಪಡಿತರ ವಿತರಣಾ ವ್ಯವಸ್ಥೆಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Advertisement

ವಿಧಾನಸೌಧದಲ್ಲಿ ಗುರುವಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಂಬಂಧಪಟ್ಟಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಡಿತರ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸ ಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಹೆಚ್ಚು ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕು. ಮುಕ್ತ ಮಾರುಕಟ್ಟೆಯಿಂದ ತೊಗರಿ ಬೇಳೆ ಖರೀದಿಸಲು ‘ಇ-ಪ್ರೊಕ್ಯೂರ್‌ವೆುಂಟ್’ ಪೋರ್ಟಲ್ ಮೂಲಕ ಇ- ಟೆಂಡರ್‌ ವ್ಯವಸ್ಥೆಗೆ ಸರ್ಕಾರ ಅಗತ್ಯ ವ್ಯವಸ್ಥೆ ಮಾಡಿಕೊಂಡಿದೆ ಎಂದು ಹೇಳಿದರು. ಸಭೆಯಲ್ಲಿದ್ದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌, ಅನ್ನಭಾಗ್ಯ ಯೋಜನೆಯಡಿ 3750 ಕೋಟಿ ರೂ. ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next