Advertisement

ಬೆಳಗಿನ ಜಾವದವರೆಗೂ ಸಿಎಂ,ಜೋಶಿ ಮತ್ತು ಪ್ರಭಾವಿ ಸಚಿವರ ಚರ್ಚೆ!

05:14 PM Apr 09, 2022 | Team Udayavani |

ಬೆಂಗಳೂರು : ‌ಸಂಪುಟ ವಿಸ್ತರಣೆಗೆ ವರಿಷ್ಠರಿಂದ ಒಪ್ಪಿಗೆ ಪಡೆಯಲು ಸಾಧ್ಯವಾಗದೇ ಬೆಂಗಳೂರಿಗೆ ವಾಪಾಸ್ ಆಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬೆಂಗಳೂರಿನ ಪ್ರಭಾವಿ ಸಚಿವರ ಜತೆಗೆ ಬೆಳಗಿನ ಜಾವದವರೆಗೂ ಚರ್ಚೆ ನಡೆಸಿರುವುದು ಈಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

Advertisement

ಶುಕ್ರವಾರ ರಾತ್ರಿ ೧೦ ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ ಜೋಶಿ ನೇರವಾಗಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬೊಮ್ಮಾಯಿ ನಿವಾಸಕ್ಕೆ ತೆರಳಿದರು. ನಂತರ ಬೆಂಗಳೂರಿನ ಪ್ರಭಾವಿ ಸಚಿವರೊಬ್ಬರಿಗೆ ಕರೆ ಮಾಡಿ ಅವರನ್ನು ಸಿಎಂ‌ ನಿವಾಸಕ್ಕೆ ಕರೆಸಿಕೊಳ್ಳಲಾಗಿದೆ.ಬೆಳಗಿನ ಜಾವ ಮೂರು ಗಂಟೆಯವರೆಗೂ ಈ ಮೂವರು ರಹಸ್ಯ ಸಭೆ ನಡೆಸಿದ್ದಾರೆ. ಆದರೆ ಮಾತುಕತೆಯ ವಿವರ ಏನೆಂಬುದು‌‌ ತಿಳಿದು ಬಂದಿಲ್ಲ, ಈ ಸಭೆಯ ಬಗ್ಗೆ ಮಾಧ್ಯಮಗಳಲ್ಲಿ ಹೆಚ್ಚಿನ‌ ಚರ್ಚೆ ನಡೆದಿಲ್ಲ.‌

ಆದರೆ ಬೊಮ್ಮಾಯಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಕ್ಕೆ ದಿಲ್ಲಿಗೆ ಹೋಗಿರಲಿಲ್ಲ. ಬೇರೆ ಬೇರೆ ಕಾರ್ಯಕ್ರಮ ನಿಮಿತ್ತ ಬಂದಿದ್ದರು ಎಂದು ಪ್ರಹ್ಲಾದ್ ಜೋಶಿ ಶನಿವಾರ ಮಧ್ಯಾಹ್ನ ಸುದ್ದಿಗಾರರಿಗೆ ಹೇಳಿಕೆ ನೀಡಿದ್ದಾರೆ. ಆದರೆ ಶುಕ್ರವಾರ ತಡರಾತ್ರಿಯಿಂದ ಬೆಳಗಿನ ಜಾವದವರೆಗೆ ನಡೆದ ಸಭೆ ಸುಖಾಸುಮ್ಮನೆ ನಡೆದಿರುವುದಲ್ಲ. ಯಾವುದೋ ರಹಸ್ಯ ವಿಚಾರಕ್ಕಾಗಿಯೇ ಈ ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next