Advertisement

ಮೀ ಟೂ ಬಾಂಬ್; ಕುಮಾರ್ ಹೇಳಿಕೆಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

02:46 PM Oct 30, 2018 | Sharanya Alva |

ಉಡುಪಿ: ನಾನು ಎಲ್ಲವನ್ನೂ ಎದುರಿಸುವ ಸಾಮರ್ಥ್ಯವನ್ನು ಹೊಂದಿದ್ದೇನೆ. ನಾನು ಯಾವುದೇ ರೀತಿಯ ತಪ್ಪನ್ನು ಮಾಡಿಲ್ಲ. ಆದರೆ ಬಿಜೆಪಿ ಮುಖಂಡ ಕುಮಾರ್ ಬಂಗಾರಪ್ಪನ ಅಭಿರುಚಿ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

Advertisement

ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಅಖಾಡ ರಂಗೇರಿದ್ದು, ಏತನ್ಮಧ್ಯೆ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಆರೋಪದಡಿ ಸಿಕ್ಕಿಬೀಳಬಹುದು ಎಚ್ಚರ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಇದನ್ನೂ ಓದಿ:ಸಿಎಂ ಕುಮಾರಸ್ವಾಮಿಗೂ ಮೀ ಟೂ ಎಚ್ಚರಿಕೆ! ಕುಮಾರ್ ಬಂಗಾರಪ್ಪ ಆಕ್ರೋಶ

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, ನಾನು ಚುನಾವಣೆ ಸಂದರ್ಭದಲ್ಲಿ ಪರ್ಸನಲ್ ವಿಚಾರದ ಬಗ್ಗೆ ಚರ್ಚೆ ಮಾಡಲು ಹೋಗಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯ ವಿಚಾರ ಇದ್ದರೆ ಚರ್ಚೆ ಮಾಡೋಣ. ಅದನ್ನು ಬಿಟ್ಟು ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ರಾಜಕೀಯ ಮಾಡುವುದು ಬೇಡ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next