Advertisement

ಮುರುಗನ್‌ ದೇಗುಲಕ್ಕೆ ಮುಖ್ಯಮಂತ್ರಿ ಭೇಟಿ

06:55 AM Sep 28, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ “ಟೆಂಪಲ್‌ ರನ್‌’ ಮುಂದುವರಿದಿದೆ. ಗುರುವಾರ ದಿಢೀರ್‌ ತಮಿಳುನಾಡಿಗೆ ಪ್ರಯಾಣ ಬೆಳೆಸಿದ ಅವರು, ತಿರಚಂದೂರು ಮುರುಗನ್‌ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಇತ್ತೀಚೆಗಷ್ಟೇ ಶೃಂಗೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದ ಕುಮಾರಸ್ವಾಮಿ, ಗುರುವಾರ ತಿರಚಂದೂರು ಮುರುಗನ್‌ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದು ಕುತೂಹಲ ಮೂಡಿಸಿದೆ.

Advertisement

ಮುಖ್ಯಮಂತ್ರಿಯಾದ ನಂತರ ತಮಿಳುನಾಡಿನ ಮಧುರೈ ಮೀನಾಕ್ಷಿ ದೇವಾಲ ಯಕ್ಕೂ ಕುಮಾರಸ್ವಾಮಿ ಭೇಟಿ ನೀಡಿದ್ದರು. ಗುರುವಾರ ಮುಖ್ಯಮಂತ್ರಿಯವರ ಅಧಿಕೃತ ಪೂರ್ವ ನಿಗದಿತ ಕಾರ್ಯಕ್ರಮಗಳು ಯಾವುವೂ ಇರಲಿಲ್ಲ. ಹೀಗಾಗಿ, ಬೆಳಗ್ಗೆ ದಿಢೀರ್‌ ತಮಿಳುನಾಡಿಗೆ ಪ್ಯಾಣ ಬೆಳೆಸಿ, ದೇವರ ದರ್ಶನ ಪಡೆದು, ನಂತರ ವಾಪಸ್‌ ಆದರು.

Advertisement

Udayavani is now on Telegram. Click here to join our channel and stay updated with the latest news.

Next