Advertisement

ಕುಮಾರಸ್ವಾಮಿ ಕೊಲ್ಲೂರು ಭೇಟಿ

08:39 AM Oct 31, 2018 | Harsha Rao |

ಕೊಲ್ಲೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಂಗಳ ವಾರ ಮಧ್ಯಾಹ್ನ ಕೊಲ್ಲೂರು ದೇವಸ್ಥಾನಕ್ಕೆ ಆಗ ಮಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

Advertisement

ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯ ನಿಮಿತ್ತ ಪ್ರಚಾರ ಭಾಷಣ ಕ್ಕಾಗಿ ಆಗಮಿಸಿದ್ದ ಮುಖ್ಯಮಂತ್ರಿ ಅಲ್ಲಿಂದ ತ್ರಾಸಿಗೆ ತೆರಳಿ ಕಾಂಗ್ರೆಸ್‌ ಜೆಡಿಎಸ್‌ ಸಂಯುಕ್ತ ಕಾರ್ಯಕರ್ತರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಬಳಿಕ ರಸ್ತೆ ಮೂಲಕ ಕೊಲ್ಲೂರಿಗೆ ಆಗಮಿಸಿದರು.

ಸಚಿವರಾದ ಡಾ| ಜಯಮಾಲಾ, ನಾಡಗೌಡ, ವಿಧಾನ ಪರಿಷತ್‌ ಸದಸ್ಯ ಭೊಜೇ ಗೌಡ, ಜಿ.ಎ. ಬಾವಾ ಜತೆ ಗಿದ್ದರು. ದೇಗುಲದ ಅರ್ಚಕ ಡಾ| ಕೆ.ಎನ್‌. ನರಸಿಂಹ ಅಡಿಗ ಹಾಗೂ ರಾಮಚಂದ್ರ ಅಡಿಗ ಅವರ ನೇತೃತ್ವ ದಲ್ಲಿ ಧಾರ್ಮಿಕ ಕಾರ್ಯ ಕ್ರಮ ಗಳು ನಡೆದವು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಎಂ. ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಎಚ್‌. ಹಾಲಪ್ಪ, ಉಪ ಕಾರ್ಯ ನಿರ್ವಹಣಾಧಿ ಕಾರಿ ಕೃಷ್ಣಮೂರ್ತಿ, ಸಮಿತಿ ಸದಸ್ಯರಾದ ರಮೇಶ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ನರಸಿಂಹ ಹಳಗೇರಿ, ಜೆಡಿಎಸ್‌ ಮುಖಂಡ ಸಬ್ಲಾಡಿ ಮಂಜಯ್ಯ ಶೆಟ್ಟಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಎಸ್‌. ಕುಮಾರ್‌, ತಾ.ಪಂ. ಸದಸ್ಯ ಗ್ರೀಷ್ಮಾ ಭಿಡೆ, ಕೆಂಚನೂರು ಶಾಲಿನಿ ಶೆಟ್ಟಿ, ರಂಜಿತ್‌ ಕುಮಾರ್‌ ಶೆಟ್ಟಿ, ಸಂದೇಶ್‌ ಭಟ್‌, ರೋಶನಿ, ಅರುಣಾ ಕಿಣಿ, ರೋಹಿತ್‌ ಕರಂಬಳ್ಳಿ, ಸಚಿನ್‌ ಜಿ. ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next