Advertisement
ಸೋಮವಾರ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ಆರಂಭವಾಗಲಿದ್ದು, ಮಂಗಳವಾರ ಸಂಜೆಯವರೆಗೆ ಮುಂದುವರಿಯಲಿದೆ. ಸಭೆಯಲ್ಲಿ ಆಡಳಿತಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವುದರೊಂದಿಗೆ ರಾಜ್ಯದಲ್ಲಿ ಶೂನ್ಯ ಬಂಡವಾಳ ಕೃಷಿ ಬಗ್ಗೆಯೂ ಮಹಾರಾಷ್ಟ್ರದ ತಜ್ಞರೊಬ್ಬರಿಂದ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳಿಗೆ ಮಾಹಿತಿ ಕೊಡಿಸಲಾಗುತ್ತದೆ. ಸಭೆಯಲ್ಲಿ ವಿವಿಧ ಇಲಾಖೆಗಳ ಸಚಿವರು, ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪಾಲ್ಗೊಳ್ಳಲಿದ್ದಾರೆ.
Related Articles
Advertisement
ಇದಲ್ಲದೆ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಜಾರಿಗೊಳಿಸುತ್ತಿರುವ ಯೋಜನೆಗಳ ಅನುಷ್ಠಾನ, ಯೋಜನೆಗಳಿಗೆ ಮಂಜೂರಾಗಿರುವ ಅನುದಾನದ ವೆಚ್ಚಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಅಲ್ಲದೆ, ಮಿತವ್ಯಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ನಿರ್ದೇಶನ ನೀಡಲಾಗುತ್ತದೆ.
ಶೂನ್ಯ ಬಂಡವಾಳ ಕೃಷಿ ಬಗ್ಗೆ ಮಾಹಿತಿ:ರಾಜ್ಯದಲ್ಲಿ ಶೂನ್ಯ ಬಂಡವಾಳ ಕೃಷಿಗೆ ಉತ್ತೇಜನ ನೀಡಲು ನಿರ್ಧರಿಸಿರುವ ಸರ್ಕಾರ ಈ ಕುರಿತಂತೆ ಜಿಲ್ಲಾಧಿಕಾರಿ ಮತ್ತು ಸಿಇಓಗಳಿಗೂ ಈ ಕುರಿತು ಮಾಹಿತಿ ನೀಡಲು ತೀರ್ಮಾನಿಸಿದೆ. ಅದಕ್ಕಾಗಿ ಮಹಾರಾಷ್ಟ್ರದಿಂದ ತಜ್ಞರೊಬ್ಬರು ಆಗಮಿಸುತ್ತಿದ್ದು, ಮಂಗಳವಾರ (ಜು.31) ಸಭೆಯಲ್ಲಿ ಶೂನ್ಯ ಬಂಡವಾಳ ಕೃಷಿ ಕೈಗೊಳ್ಳುವ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜತೆಗೆ ಅದನ್ನು ಯಾವ ರೀತಿ ಅನುಷ್ಠಾನಗೊಳಿಸಬೇಕು? ಆಡಳಿತ ಯಂತ್ರ ಯಾವ ರೀತಿ ಸಹಕರಿಸಬೇಕು ಎಂಬ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ.