Advertisement

ಜೂನ್‌ 2ನೇ ವಾರದಲ್ಲಿ ಸಿಎಂ ಸಭೆ : ಮಾಹಿತಿ ನೀಡಲು ಸೂಚನೆ

08:32 PM Jun 07, 2019 | Team Udayavani |

ಮಡಿಕೇರಿ: ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜೂನ್‌ ಎರಡನೇ ವಾರ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ವಿವಿಧ ಇಲಾಖಾ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಸಾಲ ಮನ್ನಾವನ್ನು ಎಷ್ಟು ಜನರಿಗೆ ನೀಡಲಾಗಿದೆ. ಎಷ್ಟು ಕೋಟಿ ಬಿಡುಗಡೆಯಾಗಿದೆ. ಮನಸ್ವಿನಿ, ಮೈತ್ರಿ, ವೃದ್ಧಾಪ್ಯ ವೇತನ ಹೀಗೆ ಹಲವು ಸಾಮಾಜಿಕ ಭದ್ರತಾ ಯೋಜನೆಗಳು, ಹಾಸ್ಟೆಲ್‌ಗ‌ಳಿಗೆ ನಿವೇಶನ ಒದಗಿಸುವುದು, 94 ಸಿ ಮತ್ತು 94ಸಿಸಿ ರಡಿ ವಿಲೇವಾರಿಗೆ ಬಾಕಿ ಇರುವ ಅರ್ಜಿಗಳು ಮತ್ತಿತರ ಬಗ್ಗೆ ನಮೂನೆ ಮಾದರಿಯಲ್ಲಿ ಮಾಹಿತಿ ಒದಗಿಸುವಂತೆ ಅವರು ತಿಳಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವ ಹಣಾ ಧಿಕಾರಿ ಕೆ.ಲಕ್ಷಿ¾àಪ್ರಿಯ ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್‌, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಾಜು, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್‌, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಭಾರತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಚ್ಚಾಡೋ, ಸೆಸ್ಕ್ ಇಇ ಸೋಮಶೇಖರ್‌, ಜಿ.ಪಂ. ಇಇ ಶ್ರೀಕಂಠಯ್ಯ, ರೇವಣ್ಣವರ್‌, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ಗುಪ್ತಾಜಿ, ನಗರಾಭಿವೃದ್ದಿ ಯೋಜನಾ ನಿರ್ದೇಶಕ‌ ಗೋಪಾಲಕೃಷ್ಣ, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಕೃಷ್ಣ, ಬಿಸಿಎಂ ಇಲಾಖೆ ಅಧಿಕಾರಿ ಅವಿನ್‌, ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಕುಮಾರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next