Advertisement

ಲಾಕ್ ಡೌನ್ ಬೇಡ್ವೇ ಬೇಡ, 144 ಸೆಕ್ಷನ್ ಜಾರಿ ಮಾಡಿ : ವಿಪಕ್ಷ ನಾಯಕರ ಆಗ್ರಹ

05:20 PM Apr 19, 2021 | Team Udayavani |

ಬೆಂಗಳೂರು : ವಿಧಾನಸೌಧದಲ್ಲಿ ಸಚಿವರು, ಶಾಸಕರು ಮತ್ತು ಅಧಿಕಾರಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಸಭೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಲಾಕ್ ಡೌನ್ ಮಾಡುವುದು ಬೇಡವೇ ಬೇಡ ಎಂದು ಆಗ್ರಹಿಸಿದ್ದಾರೆ.

Advertisement

ಲಾಕ್ ಡೌನ್ ಬದಲಿಗೆ 144 ಸೆಕ್ಷನ್ ಜಾರಿಗೆ ತನ್ನಿ, ಪೊಲೀಸರಿಗೆ ಅಧಿಕಾರ ಕೊಡಿ ಎಂದು ಕಾಂಗ್ರೆಸ್ ನಾಯಕರು ಲಾಕ್ ಡೌನ್‍ ಡೌನ್ ಡೌನ್ ಎಂದು ವಿಧಾನಸೌಧದಲ್ಲಿ ಕೂಗಿದರು.

ಇನ್ನು ಕಾಂಗ್ರೆಸ್ ನಾಯಕ ರಾಮಲಿಂಗ ರೆಡ್ಡಿ ನೈಟ್ ಕರ್ಫ್ಯೂವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನೈಟ್ ಕರ್ಫ್ಯೂನಿಂದ ಕೊರೋನಾ ಹೋಗಲ್ಲ. ಕೋವಿಡ್ ಹೆಸರಿನಲ್ಲಿ ರಾಜಕೀಯ ಮಾಡುವುದು ಬೇಡ. ಕಳೆದ ಬಾರಿ ಫುಡ್ ಕಿಟ್ ಕೊಟ್ಟಾಗ ಬರೀ ಬಿಜೆಪಿ ಕ್ಷೇತ್ರಗಳಿಗೆ ಮಾತ್ರ ಕೊಟ್ಟಿದ್ದೀರಿ. ಹೀಗೆ ಮಾಡೋದು ಸರೀನಾ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ಬದಲಿಗೆ 144 ಸೆಕ್ಷನ್ ಜಾರಿ ಮಾಡುವಂತೆ ರಾಮಲಿಂಗ ರೆಡ್ಡಿ ಕೂಡ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next