Advertisement

ಮೇಲ್ಮನೆ ಸದಸ್ಯರೊಂದಿಗೆ ಸಿಎಂ ಸಭೆ ತಾತ್ಕಾಲಿಕ ಮುಂದೂಡಿಕೆ

09:05 AM Sep 19, 2017 | Karthik A |

ಬೆಂಗಳೂರು : ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಶಾಲಾಡಳಿತ ಮಂಡಳಿ ಎದುರಿಸುತ್ತಿರುವ ಸಮಸ್ಯೆಗೆ ಪರಿಹಾರ ನೀಡುವಂತೆ ವಿಧಾನ ಪರಿಷತ್‌ ಸದಸ್ಯರು ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿಯ ನಿಮಿತ್ತ ಸೆ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆಯಬೇಕಿದ್ದ ಸಭೆ ತಾತ್ಕಾಲಿಕವಾಗಿ ರದ್ದಾಗಿದೆ. ಮಾಜಿ ಸಚಿವ ಖಮ್ರುಲ್‌ ಇಸ್ಲಾಂ ಅವರ ನಿಧನದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೆ.19ರ ಎಲ್ಲಾ ಕಾರ್ಯಕ್ರಮ ರದ್ದಾಗಿರುವುದರಿಂದ ಈ ಸಭೆಯನ್ನು ಮುಂದೂಡಲಾಗಿದೆ.

Advertisement

ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆ ಈಡೇರಿಸುವಂತೆ ಸೆ. 6ರಿಂದ ಬಿಜೆಪಿ ಮತ್ತು ಜೆಡಿಎಸ್‌ನ ಮೇಲ್ಮನೆಯ 12 ಸದಸ್ಯರು ವಿಧಾನಸೌಧ ಹಾಗೂ ವಿಕಾಸಸೌಧ ಮುಂಭಾಗದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದರು. ಮನವೊಲಿಕೆಗೆ ಶಿಕ್ಷಣ ಸಚಿವರುಗಳು ಯತ್ನಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಸೆ.15ರಂದು ಸಿಎಂ ಅವರು ತಮ್ಮ ನಿವಾಸದಲ್ಲಿ ಸಭೆ ಕರೆದಿದ್ದರು. ಅಂತಿಮವಾಗಿ ಸಭೆ ಹಿನ್ನೆಲೆಯಲ್ಲಿ ಸೆ.19ರಂದು ಮತ್ತೆ ಸಭೆ ಕರೆಯುವುದಾಗಿ ಭರವಸೆ ನೀಡಿದ್ದರು. ಅದರಂತೆ ಆಹೋರಾತ್ರಿ ಧರಣಿಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next