Advertisement

ಸಾಲ ಮನ್ನಾ ಕುರಿತು ಇಂದು ಸಿಎಂ ಸಭೆ 

07:50 AM May 25, 2018 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಬಹುಮತ ಸಾಬೀತುಪಡಿಸಿದ ಬಳಿಕ ರೈತರ
ಕೃಷಿ ಸಾಲ ಮನ್ನಾ ಕುರಿತಂತೆ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಮತ ಸಾಬೀತುಪಡಿಸಿದ
ಬಳಿಕ ಆರ್ಥಿಕ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ರೈತರ ಸಾಲ ಮನ್ನಾ ಕುರಿತಂತೆ ಅಂಕಿ
ಅಂಶಗಳನ್ನು ಸಂಗ್ರಹಿಸಲಾಗುವುದು ಎಂದರು. ರೈತರ ಸಾಲ ಮನ್ನಾ ನನ್ನ ಮೊದಲ ಆದ್ಯತೆ. ಆದರೆ, ಸಮ್ಮಿಶ್ರ
ಸರ್ಕಾರವಾಗಿರುವುದರಿಂದ ಈ ಕುರಿತು ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಕಾಂಗ್ರೆಸ್‌ ಜತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next