ಹವಾಮಾನ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೂ. 13ರಂದು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿ ದ್ದಾರೆ.
Advertisement
ಜೂ. 13ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಸ್ತುತ ಋತುಮಾನ, ಮಳೆಹಾನಿ ಮತ್ತಿತರೆ ವಿಚಾರಗಳ ಬಗ್ಗೆ ಮುಖ್ಯಮಂತ್ರಿಗಳು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆ ಕರೆದಿದ್ದು, ಅಗತ್ಯ ಮಾಹಿತಿಯೊಂದಿಗೆ ಅಧಿಕಾರಿಗಳು ಸಭೆಗೆ ಆಗಮಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ಅಧಿಕಾರಿಗಳಿಗೂ ಸೂಚನಾ ಪತ್ರ ರವಾನಿಸಿದೆ.