Advertisement

ಕೈ ಅತೃಪ್ತ ಶಾಸಕರೊಂದಿಗೆ ಸಿಎಂ,ರೇವಣ್ಣ ಮಾತುಕತೆ;ಎಚ್‌ಡಿಡಿಯ ಸಲಹೆ!

12:29 PM Sep 18, 2018 | Team Udayavani |

ಬೆಂಗಳೂರು: ಅಸಮಾಧಾನಗೊಂಡಿರುವ ಜಾರಕಿಹೊಳಿ ಸಹೋದರರ ಕೈಯಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ ಅಡಗಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಅಖಾಡಕ್ಕಿಳಿದು ಮಾತುಕತೆ ನಡೆಸಿದ್ದಾರೆ.

Advertisement

ಮಂಗಳವಾರ ಖಾಸಗಿ ಹೊಟೇಲ್‌ನಲ್ಲಿ ಸಚಿವ ರಮೇಶ್‌ ಜಾರಕಿಹೊಳಿ, ಶಾಸಕರಾದ ಸತೀಶ್‌ ಜಾರಕಿಹೊಳಿ ಮತ್ತು ನಾಗೇಂದ್ರ ಅವರೊಂದಿಗೆ ಸಿಎಂ ಎಚ್‌ಡಿಕೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಸಚಿವ ಎಚ್‌.ಡಿ.ರೇವಣ್ಣ ಅವರು ಹೊಟೇಲ್‌ಗೆ ಆಗಮಿಸಿದ್ದಾರೆ.

ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರೂ ಸರ್ಕಾರ ಉಳಿಸಲು ತಮ್ಮ ರಾಜಕೀಯ ಅನುಭವವನ್ನು ಬಳಸಿಕೊಳ್ಳುತ್ತಿದ್ದು , ದೂರವಾಣಿ ಕರೆ ಮಾಡಿ ಅತೃಪ್ತ ಕಾಂಗ್ರೆಸ್‌ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. 

ಮುಂಬಯಿ ರೆಸಾರ್ಟ್‌ನತ್ತ ಅತೃಪ್ತರು? 
ಅತೃಪ್ತ ಶಾಸಕರು ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಮುಂಬಯಿಯ ರೆಸಾರ್ಟ್‌ವೊಂದಕ್ಕೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next