Advertisement

ಹೈಕಮಾಂಡ್‌ ಅವಕಾಶ ಕೊಟ್ಟರೆ ನಾನೂ ಸಿಎಂ: ಸಚಿವ ಉಮೇಶ ಕತ್ತಿ

08:57 PM Aug 26, 2022 | Team Udayavani |

ಗದಗ: ಬಿಜೆಪಿ ಹೈಕಮಾಂಡ್‌ ಅವಕಾಶ ಕೊಟ್ಟರೆ ನಾನೂ ಕೂಡ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆಂದು ಸಚಿವ ಉಮೇಶ ಕತ್ತಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಸೀಬ್‌ ಇದ್ದರೆ ನಾನೂ ಸಿಎಂ ಆಗೇ ಆಗುತ್ತೇನೆ. ಬಸವರಾಜ ಬೊಮ್ಮಾಯಿ ಅವರನ್ನು ತೆಗೆದು ನಾನು ಸಿಎಂ ಆಗಲು ಸಿದ್ಧನಿಲ್ಲ. ಅವರು ನಮ್ಮವರಿದ್ದಾರೆ.

ಸಿಎಂ ಸ್ಥಾನಕ್ಕೆ ಬೆನ್ನು ಹತ್ತಲ್ಲ. ಸಿಎಂ ಆಗುವ ಯೋಗ್ಯತೆ ಎಲ್ಲರಿಗೂ ಇದೆ. ಒಂಬತ್ತು ಬಾರಿ ಶಾಸಕನಾಗಿದ್ದೇನೆ. ಎಂಟು ಇಲಾಖೆ ನಿಭಾಯಿಸಿದ್ದೇನೆ. ನಾನು ರಾಜ್ಯದ ಹಿರಿಯ ರಾಜಕಾರಣಿ. ಹುಕ್ಕೇರಿ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ.

ಸೋಲಿಸಿದರೆ ಮನೆಗೆ ಹೋಗ್ತಿನಿ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆದರೆ ರಾಜೀನಾಮೆಗೂ ಸಿದ್ಧ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next