Advertisement

ಕುತಂತ್ರದಿಂದ ಸಿಎಂ ಅವಕಾಶ ತಪ್ಪಿತು

11:27 PM Aug 18, 2019 | Team Udayavani |

ಕೊರಟಗೆರೆ: “ಮೂರು ಸಲ ಮುಖ್ಯಮಂತ್ರಿಯಾಗುವ ಅವ ಕಾಶವಿದ್ದರೂ ರಾಜಕೀಯ ಕುತಂತ್ರದಿಂದ ಕೈ ತಪ್ಪಿತು’ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್‌ ಅಸಮಾಧಾನ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಸಮುದಾಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಇಲಾಖೆ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿಯ ಪಾತ್ರವೇ ಮುಖ್ಯಪಾತ್ರ ವಹಿಸುತ್ತದೆ.

Advertisement

ಆಡಳಿತ ನಡೆಸುವ ರಾಜಕಾರಣಿಗಳ ಸಮುದಾಯಕ್ಕೆ ಮುಖ್ಯಸ್ಥಾನ ಕೊಡುತ್ತಿರುವುದು ದುರ್ದೈವದ ಸಂಗತಿ. ಸರ್ಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾವಣೆ ಆದಾಗ ಮಾತ್ರ ಜಾತಿ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಹೇಳಿದರು. ರಾಜಕಾರಣಿಗೆ ಕೇವಲ 5 ವರ್ಷ ಮಾತ್ರ ಅಧಿಕಾರ.

ಆದರೆ ಸರ್ಕಾರಿ ಅಧಿಕಾರಿಗೆ 35 ವರ್ಷ ಅಧಿಕಾರದ ಜೊತೆ ಮುಂಬಡ್ತಿ ಇರಲಿದೆ. ಶಿಕ್ಷಣ ಪ್ರತಿಯೊಬ್ಬ ಮಕ್ಕಳ ವೈಯಕ್ತಿಕ ಜೀವನ ಬದಲಾವಣೆ ಮಾಡುವ ಶಕ್ತಿ ಹೊಂದಿದೆ ಎಂದು ತಿಳಿಸಿದರು. ಗ್ರಾಮೀಣ ಬಡ ವಿದ್ಯಾರ್ಥಿಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಕೊರಟಗೆರೆ ತಾಲೂಕು ಹಿಂದು ಸಾದರ ಕ್ಷೇಮಾಭಿವೃದ್ಧಿ ಸಂಘ ರಾಜ್ಯಕ್ಕೆ ಮಾದರಿ ಆಗಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next