Advertisement

ಬೆಂಗಳೂರು ನಗರದ ಸರಾಕರಿ ಆರೋಗ್ಯ ಸೇವೆ ಸುಧಾರಣೆಗೆ ಸಿಎಂ ಸೂಚನೆ

08:05 PM Jun 03, 2022 | Team Udayavani |

ಬೆಂಗಳೂರು: ಬೆಂಗಳೂರು ನಗರದ ಸರ್ಕಾರಿ ಆರೋಗ್ಯ ಸೇವಾ ವ್ಯವಸ್ಥೆಯನ್ನು ಉತ್ತಮ ಪಡಿಸುವ ಅಗತ್ಯವಿದ್ದು, ಇದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿಯೇ ಬೆಂಗಳೂರು ನಗರ ಆರೋಗ್ಯ ಸೇವಾ ವಿಭಾಗವನ್ನು ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು.

Advertisement

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯವ್ಯಯ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನೆ ನಡೆಸಿ, ರಾಜ್ಯದಲ್ಲಿ ಸಾಮಾನ್ಯ ರೊಇಗ ರುಜಿನೆಗಳಿಗೆ ಉತ್ತಮ ಚಿಕಿತ್ಸೆ ನೀಡುವ ಉದ್ದೇಶದ ಒಟ್ಟು 438 ನಮ್ಮ ಕ್ಲಿನಿಕ್ ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದರು.

ಬೆಂಗಳೂರು ನಗರದಲ್ಲಿ ಆರೋಗ್ಯ ಸೇವಾ ಸೌಲಭ್ಯಗಳನ್ನು ಉನ್ನತೀಕರಿಸಬೇಕಾಗಿದೆ. ನಿರ್ವಹಣೆಯಲ್ಲೂ ಸುಧಾರಣೆಯಾಗಬೇಕಿದೆ. ನಗರ ವೇಗವಾಗಿ ಬೆಳೆಯುತ್ತಿದ್ದು, ಆರೋಗ್ಯ ಸೇವೆಗಳನ್ನೂ ಅದಕ್ಕೆ ಅನುಗುಣವಾಗಿ ಒದಗಿಸಬೇಕಾಗಿದೆ ಎಂದು ಅಧಿಕಾರಿಗಳಿಗೆ ತಿಳಿಸಿದರು.

ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಂಬಂಧಿಸಿದಂತೆ, ಬೆಂಗಳೂರಿನಲ್ಲಿ 200 ಹಾಗೂ ಇತರ ತಾಲ್ಲೂಕುಗಳಲ್ಲಿ 238 ನಮ್ಮ ಕ್ಲಿನಿಕ್‍ ಗಳನ್ನು ಸ್ಥಾಪಿಸಲು ಕ್ರಮ ವಹಿಸಿ. ಅಲ್ಲಿ ಜನರ ಸಾಮಾನ್ಯ ರೋಗಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

ಶುಚಿ ಯೋಜನೆಯಡಿ ಉಚಿತವಾಗಿ ವಿತರಿಸುವ ಸ್ಯಾನಿಟರಿ ಪ್ಯಾಡ್ ಗಳನ್ನು ಸ್ವಸಹಾಯ ಸಂಘಗಳಿಂದ ಖರೀದಿಸುವಂತೆ ಸೂಚಿಸಿದರು. ಜೊತೆಗೆ ಈ ಸ್ಯಾನಿಟರಿ ಪ್ಯಾಡ್‍ ಗಳ ಮಾನದಂಡಗಳ ಕುರಿತು ಸ್ವಸಹಾಯ ಸಂಘಗಳಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆಯೂ ಸೂಚಿಸಿದರು.

Advertisement

ನಿಮ್ಹಾನ್ಸ್ ಸಹಯೋಗದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಜಾರಿಗೊಳಿಸುತ್ತಿರುವ ಮೆದುಳಿನ ಆರೋಗ್ಯ ಕಾರ್ಯಕ್ರಮವನ್ನು ಧಾರವಾಡದ ಡಿಮ್ಹಾನ್ಸ್ ಸಹಯೋಗದಲ್ಲಿ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿಯೂ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇಲಾಖೆಯ ಇತರ ಯೋಜನೆಗಳನ್ನು ಸಹ ನಿಗದಿತ ಕಾಲಾವಧಿಯಲ್ಲಿ ಜಾರಿಗೊಳಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್. ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಆಯುಕ್ತ ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಅರುಂಧತಿ ಚಂದ್ರಶೇಖರ್ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next