Advertisement
ಕಳೆದ ಕೆಲ ದಿನಗಳಿಂದ ಈಚೆಗೆ ಬೆಂಗಳೂರು ನಗರದ ಕೆಲವೆಡೆ ಸೋಂಕಿನ ಪ್ರಮಾಣ ಹೆಚ್ಚಾಗಿದೆ. ಅಂತಹ ಪ್ರದೇಶಗಳನ್ನು ಗುರುತಿಸಿ ಸೀಲ್ಡೌನ್ ಮಾಡುವಂತೆ ಇಂದು ಮಧ್ಯಾಹ್ನ ನಡೆದ ಕೋವಿಡ್ ನಿಗ್ರಹ ಕಾಯ೯ಪಡೆ ಸಭೆಯಲ್ಲಿ ಮುಖ್ಯಂತ್ರಿಯವರು ಸೂಚನೆ ನೀಡಿದರು ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.
Related Articles
Advertisement
ಕಂದಾಯ ಸಚಿವ ಆರ್. ಅಶೋಕ್ ಮತ್ತು ಮುಖ್ಯಮಂತ್ರಿಯವರ ರಾಜಕೀಯ ಕಾಯ೯ದಶಿ೯ ವಿಶ್ವನಾಥ್ ಅವರಿಗೆ ಖಾಸಗಿ ಆಸ್ಪತ್ರೆಗಳ ನಿವ೯ಹಣೆ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಮನ್ವಯದಿಂದ ಕೆಲಸ ಮಾಡಲು ಮುಖ್ಯಮಂತ್ರಿಯವರು ಸೂಚಿಸಿದ್ದಾರೆ ಎಂದರು.
ಕಾನೂನು ಕ್ರಮ : ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳಪೆ ಪಿಪಿಇ ಕಿಟ್ ನೀಡಲಾಗಿದೆ ಎಂಬ ವರದಿ ಮತ್ತು ಅದನ್ನು ಸಮಪ೯ಕವಾಗಿ ವಿಲೇವಾರಿ ಮಾಡದೆ ಬಿಸಾಡಲಾಗಿತ್ತು ಎಂಬ ವಿಷಯ ಗಮನಕ್ಕೆ ಬಂದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗೆ ಮುಂದೆ ಇಂತಹ ಘಟನೆ ಮರುಕಳಿಸದಂತೆ ಸೂಚನೆ ನೀಡಲಾಗಿದೆ. ಇಷ್ಟರ ಮೇಲೂ ಅಂತಹ ಪ್ರಕರಣ ಮರುಕಳಿಸಿದರೆ ಎಚ್ಚರಿಕೆ ನೀಡಲಾಗುವುದು. ಆಗಲೂ ಪರಿಸ್ಥಿತಿ ಸರಿಯಾಗದಿದ್ದಲ್ಲಿ ಕಾನೂನು ಮೂಲಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಟಾಸ್ಕ್ಫೋಸ್೯ ಸಭೆಯಲ್ಲಿ ಲಾಕ್ಡೌನ್ ವಿಚಾರವು ಚಚೆ೯ಗೆ ಬಂತು. ಈ ಸನ್ನಿವೇಶದಲ್ಲಿ ಲಾಕ್ಡೌನ್ ಬೇಕಿಲ್ಲ ಎಂದು ತಾವು ಮತ್ತು ಡಿಸಿಎಂ ಅಶ್ವತ್ಥನಾರಾಯಣ ಅವರು ಸಿಎಂ ಅವರಿಗೆ ಹೇಳಿದ್ದೇವೆ. ಮುಂದೆ ಅವರು ನಿಧಾ೯ರ ಕೈಗೊಳ್ಳಲಿದ್ದಾರೆ.
ಈಗಾಗಲೇ ಸಿಎಂ ಅವರು ಪ್ರಕಟಿಸಿದ್ದಂತೆ ಭಾನುವಾರ ಮತ್ತು ರಾತ್ರಿ ಕಫ್ಯೂ೯ ಮುಂದಿನ ಆದೇಶದವರೆಗೆ ಮುಂದುವರಿಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಿಎಂ ನೇತೃತ್ವದಲ್ಲಿ ನಡೆದ ಟಾಸ್ಕ್ಫೋಸ್೯ ಸಭೆಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ, ಸಚಿವರಾದ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್. ಅಶೋಕ್, ಸಿಎಂ ಅವರ ರಾಜಕೀಯ ಕಾಯ೯ದಶಿ೯ ಎಸ್. ಆರ್. ವಿಶ್ವನಾಥ್ ಮತ್ತು ಹಿರಿಯ ಅಧಿಕಾರಿಗಳು ಹಾಜರಿದ್ದರು ಎಂದು ವಿವರಿಸಿದರು.