Advertisement

ವಿಮಾನ ನಿಲ್ದಾ ಣ ಕಾಮಗಾರಿ ಚುರುಕಿಗೆ ಸಿಎಂ ಸೂಚನೆ

06:37 PM Dec 15, 2019 | Suhan S |

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ಕಾಮಗಾರಿ ವೇಗ ಹೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ನಡೆದ ಉನ್ನತ ಅ ಧಿಕಾರಿಗಳ ಮಹತ್ವದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ವಿಮಾನ

Advertisement

ನಿಲ್ದಾಣ ಕಾಮಗಾರಿ ವೇಗ ಹೆಚ್ಚಿಸಲು 4ಜಿ ಅನುಮತಿ ನೀಡಲು ಸೂಚಿಸಲಾಯಿತು. ರನ್‌ವೇಯನ್ನು 1.2 ಕಿಮೀನಿಂದ 2.1 ಕಿಮೀಗೆ ಹೆಚ್ಚಿಸಲು ಅನುಮತಿ ನೀಡಲಾಯಿತು. ಈಗಾಗಲೇ ಕಾಮಗಾರಿಗೆ 40 ಕೋಟಿ ಹಣವನ್ನು ನೀಡಲಾಗಿದ್ದು ತಕ್ಷಣವೇ ಕೆಲಸ ಆರಂಭಿಸಬೇಕು. ಹೆಚ್ಚಿನ ಹಣಕಾಸು ಬೇಕಿದ್ದಲ್ಲಿ ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಭರವಸೆ ನೀಡಿದರು. ಇನ್ನು ಒಂದು ವಾರದೊಳಗೆ ಎಲ್ಲ ರೀತಿಯ ಪೇಪರ್‌ ವರ್ಕ್‌ ಮುಗಿಸಿ ಕೆಲಸ ಆರಂಭಿಸಲು ಸೂಚಿಸಿದ ಅವರು, ಇನ್ನು 6 ತಿಂಗಳ ಒಳಗೆ ಶಿವಮೊಗ್ಗದಲ್ಲಿ ವಿಮಾನ ಹಾರಾಟ ಆರಂಭವಾಗಬೇಕು ಎಂದು ಅಧಿ ಕಾರಿಗಳಿಗೆ ತಾಕೀತು ಮಾಡಿದರು. ವಿಮಾನ ನಿಲ್ದಾಣ ಕಾಮಗಾರಿಗೆ ಹೆಚ್ಚುವರಿಯಾಗಿ 140 ಕೋಟಿ ರೂ. ಅನುದಾನ ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು.

ಸಿ ಗಂದೂರು ಸೇತುವೆಗೆ ಸಂಬಂಧಿ ಸಿದಂತೆ ಈಗಾಗಲೇ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಒಪ್ಪಿದ್ದು, ಇದಕ್ಕೆ ಸಂಬಂಸಿದಂತೆ ಎಲ್ಲಾ  ರೀತಿಯ ಕ್ಲಿಯರೆನ್ಸ್‌ ತೆಗೆದುಕೊಳ್ಳಲು ಸೂಚಿಸಲಾಯಿತು. ಶಿವಮೊಗ್ಗ ರೈಲ್ವೆ ಟರ್ಮಿನಲ್‌ಗೆ ಸಂಬಂಧಿಸಿದಂತೆ ಕೋಟೆಗಂಗೂರಿನಲ್ಲಿ ಭೂ ಸ್ವಾ ಧೀನಪಡಿಸಿಕೊಳ್ಳಲು ಸೂಚಿಸಲಾಯಿತು. ತುಮಕೂರು ಶಿವಮೊಗ್ಗ ಚತುಷ್ಪಥ ಹೆದ್ದಾರಿ ಭೂ ಸ್ವಾಧೀನ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವ ಬಗ್ಗೆ ಹಾಗೂ ಶಿವಮೊಗ್ಗದ ಫ್ರೀಡಂ ಪಾರ್ಕ್‌ ಅಭಿವೃದ್ಧಿ ಬಗ್ಗೆಯೂಚರ್ಚೆ ನಡೆಸಲಾಯಿತು. ಸಂಸದ ಬಿ.ವೈ. ರಾಘವೇಂದ್ರ, ಎಂಎಲ್‌ಸಿ ಎಸ್‌. ರುದ್ರೇಗೌಡ , ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next