Advertisement

ಸಿಎಂ ರಾಜೀನಾಮೆ ಹೇಳಿಕೆ ಬಗೆಹರಿದಿದೆ

11:09 PM Jan 15, 2020 | Team Udayavani |

ಹುಬ್ಬಳ್ಳಿ: ಹರಿಹರದಲ್ಲಿ ಸಿಎಂ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದಾಗಿ ಹೇಳಿದ ಪ್ರಕರಣ ಸೌಹಾರ್ದಯುತವಾಗಿ ಬಗೆಹರಿದಿದೆ. ಈ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಜ.18ರಂದು ನಗರದ ನೆಹರು ಮೈದಾನದಲ್ಲಿ ನಡೆಯುವ ಜನಜಾಗೃತಿ ಸಭೆಯ ಸಿದ್ಧತೆ ಪರಿಶೀಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಸಿಎಂ ಯಡಿಯೂರಪ್ಪ ಅವರೇ ಬುಧವಾರ ಹೇಳಿಕೆ ನೀಡಿ ಸ್ಪಷ್ಟಪಡಿಸಿದ್ದಾರೆ. ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹಾಗೂ ಮುರಗೇಶ ನಿರಾಣಿ ಕೂಡ ಹೇಳಿಕೆ ನೀಡಿದ್ದರಿಂದ ಯಾವುದೇ ವಿವಾದವಿಲ್ಲ ಎಂದರು.

ಸಂಪುಟ ವಿಸ್ತರಣೆ ಬಗ್ಗೆ ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಅದು ಸಿಎಂ ಪರಮಾಧಿಕಾರ. ಅವರೇ ಅದನ್ನು ನಿರ್ವಹಿಸುತ್ತಾರೆ.
-ಬಸವರಾಜ ಬೊಮ್ಮಾಯಿ, ಗೃಹ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next