Advertisement

ಬಿಎಸ್‌ವೈ ವಿರುದ್ಧ ಸಿಎಂ ಸೇಡಿನ ರಾಜಕಾರಣ

07:12 AM Sep 24, 2017 | Team Udayavani |

ಬೆಂಗಳೂರು: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರ ಕಳೆದುಕೊಳ್ಳುವುದು ಖಚಿತವಾಗುತ್ತಿರುವು ದರಿಂದ ಹತಾಶೆಗೊಂಡಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಬಿಜೆಪಿ ವಕ್ತಾರ ಹಾಗೂ ಶಾಸಕ ಎಸ್‌. ಸುರೇಶ್‌ಕುಮಾರ್‌ ಆರೋಪಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಯಡಿಯೂರಪ್ಪ ಅವರನ್ನು ಟೀಕೆ ಮಾಡುತ್ತಿದ್ದಾರೆ.

Advertisement

ಮನೆಮನೆಗೆ ಕಾಂಗ್ರೆಸ್‌ ಕಾರ್ಯಕ್ರಮದ ಉದ್ಘಾಟನೆ ಯಲ್ಲೂ ಇದನ್ನೇ ಪುನರಾವರ್ತಿಸಿದ್ದು, ಇದರಿಂದ ಜನರಿಗೆ ಪುಕ್ಕಟೆ ಮನರಂಜನೆ ಸಿಗುತ್ತಿದೆಯೇ ಹೊರತು ಕಾಂಗ್ರೆಸ್‌ಗೆ ಯಾವುದೇ ಲಾಭವಾಗುತ್ತಿಲ್ಲ’ ಎಂದು ವ್ಯಂಗ್ಯವಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next