Advertisement

Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ

11:03 AM Oct 23, 2024 | Team Udayavani |

ಗುವಾಹಟಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಖ್ಯ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ, ನವೆಂಬರ್ 20 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಭಾರೀ ರಾಜಕೀಯ ಚಟುವಟಿಕೆಗಳ ಭರಾಟೆಯ ನಡುವೆಯೂ ದೇಗುಲಕ್ಕೆ ಭೇಟಿ ನೀಡಿದ್ದಾರೆ.

Advertisement

ವಿಶೇಷವೆಂದರೆ,ಅವಿಭಜಿತ ಶಿವಸೇನೆಯ 39 ಬಂಡಾಯ ಶಾಸಕರೊಂದಿಗೆ 2022 ರ ಜೂನ್ ನಲ್ಲಿ ಶಿಂಧೆ ಅವರು ಪಕ್ಷದ ಅಧ್ಯಕ್ಷ ಮತ್ತು ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಾಯಕತ್ವದ ವಿರುದ್ಧ ಬಂಡಾಯ ಸಾರಿದ್ದ ವೇಳೆ ಕಾಮಾಖ್ಯ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆ ಬಳಿಕ ಶಿವಸೇನೆ ವಿಭಜನೆಯಾಗಿ ಶಿಂಧೆ ಸಿಎಂ ಆಗಿದ್ದರು.

2022, ಜೂನ್ 30, ರಂದು, ಶಿಂಧೆ ಬಿಜೆಪಿಯ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು, ಬಳಿಕ ನವೆಂಬರ್‌ನಲ್ಲಿ ದೇವಿಯ ಆಶೀರ್ವಾದ ಪಡೆಯಲು ಕಾಮಾಖ್ಯ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಶಿಂಧೆ ಅವರು ಎರಡನೇ ಬಾರಿಗೆ ಗುವಾಹಟಿಗೆ ಭೇಟಿ ನೀಡಿದ ಬಳಿಕ ಶಿವಸೇನೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ನವೆಂಬರ್ 20 ರಂದು ಮಹಾರಾಷ್ಟ್ರ ಮತದಾನ ಮಾಡುವಾಗ ಶಿಂಧೆ ಅವರಿಗೆ ಅತ್ಯಂತ ನಿರ್ಣಾಯಕ ವಿಧಾನಸಭಾ ಚುನಾವಣೆಯ ಹೋರಾಟವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next