Advertisement

CM ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪಾಗಿದೆ: ಮೈಸೂರು ಚಲೋ ಸಮಾರೋಪದಲ್ಲಿ ಎಚ್ ಡಿಕೆ ಕಿಡಿ

07:48 PM Aug 10, 2024 | Team Udayavani |

ಮೈಸೂರು: ‘ನನ್ನ ಬದುಕಿನಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ಈಗ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ವ್ಯಂಗ್ಯವಾಗಿ ಕಿಡಿ ಕಾರಿದ್ದಾರೆ.

Advertisement

ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ (ಆಗಸ್ಟ್ 10) ನಡೆದ ಬಿಜೆಪಿ-ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾವೇಶದಲ್ಲಿ ಮಾತನಾಡಿ ” ಮುಡಾ ದಲ್ಲಿ ಕಾನೂನು ಬಾಹಿರವಾಗಿ ಸೈಟ್​ ಪಡೆಡಿರುವ ಕುರಿತು ಪ್ರಶ್ನೆ ಮಾಡುತ್ತಿದ್ದು ಅರಿಶಿನ ಕುಂಕುಮಕ್ಕಾಗಿ ಭೂಮಿ ಕೊಟ್ಟಿದ್ದು ತಪ್ಪೇ ಎನ್ನುತ್ತಿದ್ದಾರೆ. ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡುತ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊಟ್ಟಿರುವುದು ಸರಕಾರದ ಭೂಮಿ. ಸಿದ್ದರಾಮಯ್ಯ ಅವರ ಮೂಗಿನ ನೇರಕ್ಕೆ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಸಿದ್ದರಾಮಯ್ಯ ಅವರು ವಾಪಸ್ ಕೊಡುತ್ತೇನೆ ಎಂದು ಸೈಟ್ ವಾಪಸ್​ ಕೊಟ್ಟರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವೇ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರೇ ನೀವು ಕೇವಲ ಹಿಂದುಳಿದ ವರ್ಗಗಳ ಮುಖ್ಯಮಂತ್ರಿಯಲ್ಲ, ರಾಜ್ಯದ ಆರುವರೆ ಕೋಟಿ ಜನರ ಪ್ರತಿನಿಧಿ. ಅವರೆಲ್ಲರ ರಕ್ಷಣೆ ಮಾಡುವ ಜವಾಬ್ದಾರಿ ನಿಮ್ಮದು’ ಎಂದು ಕಿಡಿ ಕಾರಿದರು.

ಡಿ.ಕೆ.ಶಿವಕುಮಾರ್ ವಿರುದ್ದ ಆಕ್ರೋಶ

Advertisement

“ನನ್ನ ಅಣ್ಣನ ಮಗನನ್ನು(ಎಚ್.ಡಿ.ರೇವಣ್ಣ ಅವರ ಪುತ್ರ) ಜೈಲಿಗೆ ಕಳುಹಿಸಿದ್ದೇನೆ ಎಂದು ಹೇಳಿದ್ದೀರಿ. ಮಿಸ್ಟರ್ ಶಿವಕುಮಾರ್, ನಾನು ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಿಂತು ಮಾತಾಡುತ್ತಿದ್ದು, ಕಾಫಿ ಡೇ ಮಾಲಕ ಸಿದ್ದಾರ್ಥ ಅವರ ಸಾವಿಗೆ ಕಾರಣ ಯಾರು ಎಂದು ಹೇಳುತ್ತೀರಾ?” ಎಂದು ಗಂಭೀರ ಸವಾಲೆಸೆದರು.

ವಿಡಿಯೋ ಪ್ರದರ್ಶನ ಪೈಪೋಟಿ

ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಬಂಧನಕ್ಕೊಳಗಾಗಿ ತಿಹಾರ್ ಜೈಲಿಗೆ ಹೋಗಿದ್ದ ವಿಡಿಯೋ ಪ್ರದರ್ಶಿಸಲಾಯಿತು. ದಲಿತ ಕುಟುಂಬದ ಮೇಲೆ ದೌರ್ಜನ್ಯ ಮಾಡಿದುದು, ಕಾಂಗ್ರೆಸ್ ಭ್ರಷ್ಟಾಚಾರದ ಕುರಿತು ಸ್ವಪಕ್ಷೀಯರೇ ಆದ ಜನಾರ್ದನ ಪೂಜಾರಿ, ಮಾರ್ಗರೆಟ್ ಆಳ್ವ, ಬಿ.ಕೆ.ಹರಿಪ್ರಸಾದ್, ರಮೇಶ್‌ ಕುಮಾರ್ ಮೊದಲಾದ ಹಿರಿಯ ನಾಯಕರ ಹೇಳಿಕೆಗಳನ್ನು ಪ್ರದರ್ಶಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next