Advertisement

CM Siddaramaiah ವಿಚ್ಛಿದ್ರಕಾರಿ ಶಕ್ತಿಗಳ ನಾಶಕ್ಕೆ ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ

11:56 PM Sep 15, 2024 | Shreeram Nayak |

ಬೆಂಗಳೂರು: ಏಕತೆ ನೆಪದಲ್ಲಿ ಸಮಾಜ ವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ವಿಧಾನಸೌಧ ಮುಂಭಾಗ ರವಿವಾರ ಅಂತಾ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ನಿರ್ಮಿಸಲಾಗಿದ್ದ ಮಾನವ ಸರಪಳಿಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ವಿಧ್ವಂಸಕಾರಿ ಶಕ್ತಿಗಳು ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುವ ಮತ್ತು ಸಂವಿಧಾನವನ್ನು ಕಿತ್ತುಹಾಕುವ ಬಹುತ್ವದ ವಿರೋಧಿಗಳಾಗಿವೆ. ಹಾಗಾಗಿ ಯಾವುದೇ ಕಾರಣಕ್ಕೂ ಈ ಶಕ್ತಿಗಳು ಪ್ರಬಲವಾಗಲು ಬಿಡಬಾರದು ಎಂದರು.

ಅಸಮಾನತೆ ತೊಡೆದು ಹಾಕುವವರೆಗೂ ದೇಶಕ್ಕೆ ಸಿಕ್ಕ ಸ್ವಾತಂತ್ರÂಕ್ಕೆ ಅರ್ಥ ಇರುವುದಿಲ್ಲ. ದೇಶದ ಸಂಪತ್ತು ಎಲ್ಲರಿಗೂ ಹಂಚಿಕೆ ಆಗಬೇಕುಎನ್ನುವುದು ಪ್ರಜಾಪ್ರಭುತ್ವದ ಆಶಯ. ನಾವೇನೋ ಸಮಾನತೆ ಸಾಧಿಸಿ ಬಿಟ್ಟಿದ್ದೇವೆ ಅಂತ ನಾನು ಹೇಳುವುದಿಲ್ಲ. ಆದರೆ ಎಲ್ಲ ಜಾತಿ-ಧರ್ಮ, ವರ್ಗಗಳಿಗೂ ಅನುಕೂಲವಾಗುವಂತೆ ಗ್ಯಾರಂಟಿಗಳನ್ನು ರೂಪಿಸಿ,ಸಮಸಮಾಜ ನಿರ್ಮಾಣದತ್ತ ಪ್ರಾಮಾಣಿಕ ಪ್ರಯತ್ನವನ್ನಂತೂ ಮಾಡುತ್ತಿ ದ್ದೇವೆ. ಆದರೆ ಕೆಲವು ವಿಧ್ವಂಸಕ ಶಕ್ತಿಗಳು ಬಡವರ ಪರವಾಗಿರುವ ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಏಕತೆ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವಾಗೆತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next