Advertisement

‘ವೀಕೆಂಡ್‌ ವಿತ್‌ ರಮೇಶ್‌’ನಲ್ಲಿ ಸಿಎಂ

11:56 AM Jun 23, 2017 | Karthik A |

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ವೀಕೆಂಡ್‌ ವಿತ್‌ ರಮೇಶ್‌’ ಕಾರ್ಯಕ್ರಮದ ಈ ವಾರದ ಅತಿಥಿಯಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗವಹಿಸಿದ್ದಾರೆ. ಗುರುವಾರ ನಗರದ ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗವಹಿಸಿ, ತಮ್ಮ ಜೀವನದ ಹಲವು ಮಹತ್ವದ ಸಂಗತಿಗಳನ್ನು ಹಂಚಿಕೊಂಡರು. ನಟ ರಮೇಶ್‌ ಅರವಿಂದ್‌ ನಡೆಸಿಕೊಡುವ ಈ ಕಾರ್ಯಕ್ರಮವು ಈ ವಾರಾಂತ್ಯ ಪ್ರಸಾರವಾಗಲಿದೆ.

Advertisement

ಇನ್ನು ಮಾಜಿ ಸಚಿವ ಎಚ್‌.ಎಂ. ರೇವಣ್ಣನವರ ಮಗ ಅನೂಪ್‌ ರೇವಣ್ಣ ಅಭಿನಯಿಸಿರುವ ‘ಪಂಟ’ ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗುರುವಾರ ರಾತ್ರಿ ಮಲ್ಲೇಶ್ವರದ ರೇಣುಕಾಂಬ ಪ್ರಿವ್ಯೂ ಥಿಯೇಟರ್‌ನಲ್ಲಿ ಚಿತ್ರತಂಡದವರು ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಗಿಯಾಗಿ ಚಿತ್ರವನ್ನು ವೀಕ್ಷಿಸಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕ ಎಸ್‌. ನಾರಾಯಣ್‌, ನಿರ್ಮಾಪಕ ಸುಬ್ರಹ್ಮಣ್ಯಂ, ಅನೂಪ್‌ ಸೇರಿದಂತೆ ಹಲವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next