Advertisement

Bidar; ‘ದಲಿತ ಸಿಎಂ ಎಂದು ಅವರು ಎಲ್ಲಿ ಹೇಳಿದ್ದಾರೆ…..’: ಸಿದ್ದರಾಮಯ್ಯ ಪ್ರತಿಕ್ರಿಯೆ

02:12 PM Mar 07, 2024 | Team Udayavani |

ಬೀದರ್: ಸಮಾಜ ಕಲ್ಯಾಣ ಸಚಿವ ಎಸ್.ಸಿ ಮಹದೇವಪ್ಪ ಅವರ ದಲಿತ ಸಿಎಂ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರತಿಕ್ರಿಯೆ ನೀಡಿದ್ದು, “ದಲಿತ ಸಿಎಂ ಎಂದು ಎಲ್ಲಿ ಹೇಳಿದ್ದಾರೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರವರು ಹೇಳಿದ ಮಾತನ್ನು ಟ್ವೀಟ್ ಮಾಡಿದ್ದಾರೆ” ಎಂದರು.

Advertisement

ಲೋಕಸಭಾಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರಕ್ಕೆ ಮಾತನಾಡಿ, ಇನ್ನು ಎರಡು, ಮೂರು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತದೆ. ಕೇಂದ್ರ ಚುನಾವಣಾ ಸಮಿತಿಯಿದೆ. ಅಲ್ಲಿ ಚರ್ಚೆಯಾಗಿ ಎರಡು ಮೂರು ದಿನಗಲ್ಲಿ ಬಿಡುಗಡೆಯಾಗುತ್ತದೆ ಎಂದು ಅವರು ಹೇಳಿದರು.

ರಾಮೇಶ್ವರಂ ಕೆಪೆ ಬಾಂಬ್ ಸ್ಫೋಟದ ಆರೋಪಿ ಇನ್ನೂ ಬಂಧನವಾಗದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಮ್ಮ ಪೊಲೀಸರು ಹುಡುಕುತ್ತಿದ್ದಾರೆ. ಎನ್ಐಎ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬಹಳ ಗಂಭೀರವಾಗಿ ಎನ್ಐಎ, ಪೊಲೀಸರು ಹುಡುಕುತ್ತಿದ್ದಾರೆ. ಕೆಲವು ಮಹತ್ವದ ಸುಳಿವು ಸಿಕ್ಕಿದೆ ಅವುಗಳನ್ನು ನಾನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next