Advertisement

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

05:25 PM Oct 04, 2024 | Team Udayavani |

ಅರಸೀಕೆರೆ: ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಹಾಗೂ ಸಿದ್ದರಾಮಯ್ಯನವರ ತೇಜೋವಧೆ ಮಾಡಲು ಹೊರಟಿರುವ ಬಿಜೆಪಿ ಷಡ್ಯಂತ್ರಕ್ಕೆ ಸಿಲುಕಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಕರ್ನಾಟಕ ಗೃಹ ಮಂಡಲಿ ಅಧ್ಯಕ್ಚರು ಹಾಗೂ ಶಾಸಕ ಕೆ.ಎಂ.ಶಿವ ಲಿಂಗೇಗೌಡ ತಿಳಿಸಿದರು.

Advertisement

ನಗರದಲ್ಲಿ ಉದಯವಾಣಿಯೊಂದಿಗೆ ಅವರು ಮಾತನಾಡಿ, ರಾಜ್ಯದಲ್ಲಿನ ಕೋಟ್ಯಂತರ ಕುಟುಂಬಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಇದರಿಂದ ಪ್ರತಿ ಕುಟುಂಬಗಳಿಗೆ ವಾರ್ಷಿಕ ತಲಾ 40 ರಿಂದ 50 ಸಾವಿರ ರೂಗಳ ಅನುಕೂಲವಾಗುತ್ತಿದೆ, ಇದರಿಂದ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎನ್ನುತ್ತಿದ್ದ ಪ್ರತಿಪಕ್ಷಗಳ ಲೆಕ್ಕಾಚಾರ ತಲೆಕೆಳಗಾಗಿದೆ. ಪರಿಣಾಮ ಹೊಟ್ಟೆ ಉರಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಮುಡಾ ನಿವೇಶನಗಳ ಗೂಬೆ ಕೂರಿಸುವ ಮೂಲಕ ಅವರ ತೇಜೋವಧೆಯನ್ನು ಮಾಡಲು ಬಿಜೆಪಿ ಪಕ್ಷದವರು ಷಡ್ಯಂತರ ರೂಪಿಸಿದ್ದು, ಅದಕ್ಕೆ ಜೆಡಿಎಸ್‌ ನಾಯಕರು ಕೈ ಜೋಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡ ಶಾಮೀಲಾಗಿ ಇಡಿಗೆ ಈ ಪ್ರಕರಣದ ತನಿಖೆಯನ್ನು ವಹಿಸುತ್ತಿದೆ. ಆದರೆ, ಈ ಯಾವುದೇ ಷಡ್ಯಂತ್ರಗಳಲ್ಲಿ ಹೆದರಿ ಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆಯನ್ನು ನೀಡುವು ದಿಲ್ಲ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಈ ಬಗ್ಗೆ ಆತಂಕ ಬೇಡ ಎಂದು ಹೇಳಿದರು.

ಸಿದ್ದರಾಮಯ್ಯನವರ ಧರ್ಮಪತ್ನಿ ಪಾರ್ವತಿ ಅವರು ಆತ್ಮಸಾಕ್ಷಿಗೆ ಕಟ್ಟುಬಿದ್ದು, 14 ನಿವೇಶನ ಗಳನ್ನು ಮುಡಾಕ್ಕೆ ಹಸ್ತಾಂತರ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಇ.ಡಿ. ತನಿಖೆಗೆ ಮುಂದಾಗಿದೆ. ಪ್ರತಿ ಪಕ್ಷದ ನಾಯಕರ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ ಅವರು ಬಿಜೆಪಿ ಪಕ್ಷದವರು ಯಾವತ್ತೂ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ಹಾಗೂ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಾರೆ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next