Advertisement

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

10:22 PM Jul 02, 2024 | Team Udayavani |

ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಜಾರಿಯಾದ ಅನೇಕ ನಿರ್ಧಾರ, ಆದೇಶ, ಟೆಂಡರ್‌, ಅನುದಾನ ವಾಪಸ್‌ ಪಡೆದ ರೀತಿಯಲ್ಲಿ ಮುಡಾದಿಂದ ನಿಮ್ಮ ಪತ್ನಿಗೆ ಹಂಚಿಕೆಯಾದ ನಿವೇಶನವನ್ನೂ ವಾಪಸ್‌ ಕೊಟ್ಟು ಬಿಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಆಗ್ರಹಿಸಿದ್ದಾರೆ.

Advertisement

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಮುಡಾದಿಂದ ಹಂಚಿಕೆಯಾದ ನಿವೇಶನ ಅಕ್ರಮವನ್ನು ಮುಚ್ಚಿಡಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರ ಕುಟುಂಬ ವರ್ಗದವರು ಸೈಟ್‌ ಪಡೆದಿರುವುದು ದಾಖಲೆಗಳಿಂದ ದೃಢಪಟ್ಟಿದೆ. ಇದು ಬಿಜೆಪಿ ಕಾಲದಲ್ಲಿ ಕೊಟ್ಟಿದ್ದು ಎಂಬ ಸಬೂಬು ಹೇಳಿ ತಪ್ಪಿಸಿಕೊಳ್ಳಲಾಗದು. ನಿಮಗೆ ನೈತಿಕತೆ ಇದ್ದರೆ ಪತ್ನಿಗೆ ಕೊಟ್ಟ ಸೈಟ್‌ ವಾಪಸ್‌ ಮಾಡಿ, ಜತೆಗೆ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ಕೊಡಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next